Advertisement
MIRROR FOCUS

ಬೇಸಗೆಯ ಕಾವು ಹೆಚ್ಚಾಯ್ತು | ನೀರಿನ ಬಗ್ಗೆ ಇರಲಿ ಎಚ್ಚರ | ಕುಡಿಯುವ ನೀರಿಗೂ ತತ್ತ್ವಾರ ಬಂದಿದೆ ಎಚ್ಚರವಾಗಿ..!!

Share

ನೀರು(Water) ಜೀವ ಜಲ. ಈಗಲೇ ಎಚ್ಚರವಾಗಿ, ಹಲವು ಕಡೆ ನೀರಿಗೆ ಹಾಹಾಕಾರವೆದ್ದಿದೆ(Water Crisis). ಕೆಲವು ಕಡೆ ನೀರಿಲ್ಲದೆ ಪರದಾಟ ಶುರುವಾಗಿದೆ. ನೀರಿನ ಮೂಲ(Water source) ಮಾರ್ಚ್ ಮೊದಲರ್ಧದಲ್ಲೇ ಈ ಬಾರಿ ಬರಿದಾಗಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಬೆಂಗಳೂರಿಗೆ(Bengaluru) ನೀರುಣಿಸುವ KRS ಕೂಡಾ ಬರಿದಾಗಲಿದೆ. ಪ್ರಕೃತಿ ಮುನಿಸಿಕೊಂಡು ಮಳೆಯ(Rain) ಕೃಪೆ ತೋರದೇ ಇದ್ದರೆ ಜೀವನದ ಸಂಕಷ್ಟ ಹೇಳತೀರದಂತಾಗಲಿದೆ, ಕುಡಿಯುವ ನೀರಿಗೂ(Drinking water) ಸಂಕಷ್ಟ ಎದುರಾಗಲಿದೆ. ಗುಳೇ(Migration) ಹೋಗುವ ಪರಿಸ್ಥಿತಿ ಬಂದರೂ ಬರಬಹುದು. ಇದಕ್ಕಾಗಿ ಈಗಲೇ ಎಚ್ಚರವಾಗಿ ನೀರಿನ ಬಗ್ಗೆ ಇರಲಿ ಎಚ್ಚರ.

ಇದು ಎಚ್ಚರಿಕೆ ಕರೆಗಂಟೆ, ಪ್ರತಿಯೊಬ್ಬರೂ ನೀರಿನ ಮಿತಬಳಕೆ ಬಗ್ಗೆ ಯೋಚಿಸಿ, ತಮ್ಮ ತಮ್ಮ ಮನೆ, ಅಪಾರ್ಟ್ಮೆಂಟ್ನಲ್ಲಿ ನೀರುಳಿಸುವ ಪ್ರಯತ್ನ ಪಡಬೇಕಾದ ಅತ್ಯವಶ್ಯಕತೆ ಇದೆ.ಕೃಷಿಯಲ್ಲೂ ಯಥೇಚ್ಛವಾಗಿ ನೀರು ಬಳಕೆ ಮಾಡಬೇಡಿ. ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟನ್ನು ಬಳಕೆ ಮಾಡಿ. ಕೊಳವೆಬಾವಿಯಿಂದ ಬೇಕಾಬಿಟ್ಟಿಯಾಗಿ ನೀರೆತ್ತಬೇಡಿ, ಉಚಿತ ವಿದ್ಯುತ್‌ ನೆಪದಲ್ಲಿ ಕೊಳವೆಬಾವಿಯನ್ನೇ ಬರಿದು ಮಾಡಬೇಡಿ. ಈ ಪರಿಸರ, ಸಮಾಜದ ಮೇಲೂ ಕಾಳಜಿ ಇರಲಿ. ನೀರು ಉಳಿಸಲು ಈಗ ಹೀಗೆ ಮಾಡಿ…

ಎಚ್ಚರಿಕೆಗಳು ಹೀಗೆ ಇರಲಿ:

  • ನೀರನ್ನು ಆದಷ್ಟು ಮರುಬಳಕೆ ಮಾಡಿ.
  • ಕುಡಿಯಲು ಹಾಹಾಕಾರ ಇರುವ ಸಂದರ್ಭದಲ್ಲಿ, ವಾಹನಗಳನ್ನು ತೊಳೆಯುವ ನೀರನ್ನು ಉಳಿಸಿ-ತೊಳೆಯದೇ ಇದ್ದರೂ ಪರವಾಗಿಲ್ಲ.
  • ಟಾಯ್ಲೆಟ್ ಫ್ಲಶ್ ಮಾಡುವಾಗ ಎಚ್ಚರ ವಹಿಸಿ, ಮಿತ ಬಳಕೆ ಮಾಡಿ!.
  • ಕಡಿಮೆ ನೀರಿನಲ್ಲಿ ಸ್ನಾನ ಮುಗಿಸಿ, ನೀರು ಉಳಿಸಿ. ಸ್ನಾನಕ್ಕೆ ಬಕೆಟ್ ಬಳಸಿ.
  • ಶವರ್ ಬಳಕೆ ಕಡ್ಡಾಯ ನಿಲ್ಲಿಸಿ.
  • ಟೆರೇಸ್ ಗಾರ್ಡನ್, ನಿಮ್ಮ ಅಪಾರ್ಟ್ಮೆಂಟ್ ಗಿಡಗಳ ನೀರುಣಿಸುವಿಕೆ ಮಿತಗೊಳಿಸಿ, ಪೋಲಾಗುವುದನ್ನು ತಪ್ಪಿಸಿ. ಪಾತ್ರೆ ತೊಳೆದ ನೀರನ್ನು ಗಿಡಗಳಿಗೆ ಬಳಸಿ.
  • ಬ್ರಶ್ ಮತ್ತು ಶೇವ್ ಮಾಡುವಾಗ ನಲ್ಲಿಯನ್ನು ತೆರೆದಿಡಬೇಡಿ.
  • ಕುಡಿಯುವ ನೀರಿನ ಬಾಟಲಿಗಳಲ್ಲಿ ಅರ್ಧ ನೀರು ಪೋಲು ಮಾಡಿ ಬಿಸಾಕಬೇಡಿ.
  • ನಲ್ಲಿಯ ಲೀಕೇಜ್ ಗಳನ್ನು ಕೂಡಲೆ ಸರಿಪಡಿಸಿ.
  • ನೀರು ಬಂಗಾರಕ್ಕಿಂತ ಸಾವಿರ ಪಾಲು ಮಿಗಿಲು.‌ ನಿಮ್ಮ ಒಡವೆಗಳಿಗೆ ಕೊಡುವ ಗಮನ ನೀರಿಗೂ ಕೊಡಿ.
  • ಮಕ್ಕಳು ನೀರು ಪೋಲು‌ಮಾಡದಂತೆ, ಓವರ್ ಟ್ಯಾಂಕ್ ಗಳು ತುಂಬಿ ಹರಿಯದಂತೆ ಎಚ್ಚರ ವಹಿಸಿ. ನಾನೊಬ್ಬ ಮಿತ ಬಳಕೆ ಮಾಡಿದರಾಯಿತೆ ಎಂಬ ವಿತಂಡವಾದ ಬೇಡ. ಎಲ್ಲ ಬೆಂಗಳೂರಿಗರು ತಲೆಗೊಬ್ಬರಂತೆ ದಿನಕ್ಕೆ 2.5 ಲೀಟರ್ ನೀರು ಉಳಿಸಿದರೆ, 22 ದಿನಗಳಲ್ಲಿ ಒಂದು ಅಲಸೂರು ಕೆರೆಯನ್ನು ತುಂಬಿಸಬಲ್ಲುದು! ಯೋಚಿಸಿ, ನೀರು ಉಳಿಸಿ
  • ಕೃಷಿಕರೂ ಅಷ್ಟೇ, ಕೊಳವೆಬಾವಿಯಿಂದ ದಿನಕ್ಕೆ ಅಗತ್ಯವಾದರೆ ಮಾತ್ರಾ ತೋಟಕ್ಕೆ ನೀರುಣಿಸಿ
  • ಕೆರೆ, ಹೊಳೆಗಳು ಇದ್ದರೆ ಅದರಿಂದಲೇ ನೀರನ್ನು ಬಳಕೆ ಮಾಡಿ
  • ಅಂತರ್ಜಲಮಟ್ಟ ಕಾಪಾಡಿಕೊಂಡರೆ ಕೆರೆ, ಬಾವಿಗಳಲ್ಲೂ ನೀರು ಉಳಿಯಲು ಸಾಧ್ಯವಿದೆ.
  • ತೋಟಗಳಿಗೆ ಅಗತ್ಯಕ್ಕೆ ತಕ್ಕಷ್ಟೇ ಈಗ ನೀರು ಬಳಕೆ ಮಾಡಲು ಅಭ್ಯಾಸ ಮಾಡಿರಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

45 minutes ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

9 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

16 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago