ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಸದ್ಯ ಅಣೆಕಟ್ಟುಗಳಲ್ಲಿ ಸದ್ಯ ನೀರಿನ ಸಂಗ್ರಹ ಉತ್ತಮವಾಗಿದ್ದು, ಮಳೆಯೂ ಬರುತ್ತಿರುವುದರಿಂದ ಕುಡಿಯುವ ನೀರಿನ ಅಭಾವ ತಲೆದೋರದಿದರೂ, ಮುಂದಿನ ಎರಡು ತಿಂಗಳ ಅವಧಿಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವ ಕಾರಣ ಜಲಮೂಲಗಳಲ್ಲಿ ಬೇಸಿಗೆಯ ನೀರಿನ ಪೂರೈಕೆಗೆ ಅಗತ್ಯ ನೀರಿನ ಸಂಗ್ರಹವಿದೆ. ಮೇ ತಿಂಗಳಲ್ಲೇ ಮುಂಗಾರು ಆರಂಭವಾಗುವ ನಿರೀಕ್ಷೆ ಇರುವ ಕಾರಣ ನೀರಿನ ಸಮಸ್ಯೆ ಎದುರಾಗಬಹುದು ಎಂದು ಮುಲ್ಲೈ ಮುಗಿಲನ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆಂದನ್, ಶಾಸಕ ಆಶೋಕ ಕುಮಾರ್ ರೈ, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…