ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕುಡಿಯುವ ನೀರಿನ ನಿರ್ವಹಣೆ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ವಿಜಯಪುರ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಗಾಗಿ 50 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಕೃಷ್ಣಾ ನದಿಯಿಂದ ನೀರೆತ್ತಿ ಕೊಲ್ಹಾರದಿಂದ ಮುಳವಾಡ, ಹೊನಗನಹಳ್ಳಿ, ವಿಜಯಪುರ ಮಾರ್ಗದಲ್ಲಿ ಅಳವಡಿಸಿರುವ ಪಿ.ಎಸ್.ಸಿ ಕೊಳವೆ ಮಾರ್ಗ ಪದೇ ಪದೇ ಒಡೆದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತಿತ್ತು.ಈ ಸಮಸ್ಯೆಯನ್ನು ಸರಿಪಡಿಸಿ ಎಂ.ಎಸ್. ಪೈಪ್ ಅಳವಡಿಕೆ ಮತ್ತಿತರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…