ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕುಡಿಯುವ ನೀರಿನ ನಿರ್ವಹಣೆ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ವಿಜಯಪುರ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಗಾಗಿ 50 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಕೃಷ್ಣಾ ನದಿಯಿಂದ ನೀರೆತ್ತಿ ಕೊಲ್ಹಾರದಿಂದ ಮುಳವಾಡ, ಹೊನಗನಹಳ್ಳಿ, ವಿಜಯಪುರ ಮಾರ್ಗದಲ್ಲಿ ಅಳವಡಿಸಿರುವ ಪಿ.ಎಸ್.ಸಿ ಕೊಳವೆ ಮಾರ್ಗ ಪದೇ ಪದೇ ಒಡೆದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತಿತ್ತು.ಈ ಸಮಸ್ಯೆಯನ್ನು ಸರಿಪಡಿಸಿ ಎಂ.ಎಸ್. ಪೈಪ್ ಅಳವಡಿಕೆ ಮತ್ತಿತರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…