MIRROR FOCUS

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Share

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು  ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.………ಮುಂದೆ ಓದಿ……..

Advertisement

ಜಿಲ್ಲಾಧಿಕಾರಿ  ಮುಲ್ಲೈ  ಮುಹಿಲನ್ ಎಂ ಪಿ  ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ ತುಂಬೆ  ಡ್ಯಾಮ್ ನಲ್ಲಿ   5.70 ಮೀಟರ್ ನೀರು ಇದ್ದು, ಎ ಎಂ ಆರ್ ಅಣೆಕಟ್ಟಿನಲ್ಲಿ  ನೀರಿನ ಮಟ್ಟ 18.9 ಮೀಟರ್ ಇದೆ ಎಂದು ಮಹಾನಗರಪಾಲಿಕೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದಲ್ಲಿ  ಅಥವಾ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಅಧಿಕಾರಿಗಳು ತಮ್ಮ ಹಂತದಲ್ಲಿ ವ್ಯವಸ್ಥಿತವಾಗಿ  ಕ್ರಮವಹಿಸಲು  ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ  ಸ್ಪಂದಿಸಿ ಸಮಸ್ಯೆಗಳನ್ನು  ಪರಿಹರಿಸಲು ಜಿಲ್ಲಾಧಿಕಾರಿ ಸೂಚಿಸಿದರು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕವೂ ನೀರು ಸರಬರಾಜು ಮಾಡಲು ಅವರು ತಿಳಿಸಿದರು. ನಗರ ಪ್ರದೇಶಗಳಲ್ಲಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸರಬರಾಜು ನಿರ್ವಹಣೆ ಮಾಡಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ತಪ್ಪಿಸಲು  ರಸ್ತೆ ಬದಿಗಳ,  ಕಾಡಿನ ಒಳಗಡೆ ಇರುವ ವಿದ್ಯುತ್ ಲೈನ್‍ಗಳು  ಗಾಳಿಗೆ ತಾಗಿಕೊಂಡು ಬೆಂಕಿ ಕಿಡಿ ಹಾರದಂತೆ, ಟ್ರಾನ್ಸ್‍ಫಾರ್ಮರ್‍ಗಳಲ್ಲಿ ಉಂಟಾಗುವ ಬೆಂಕಿಯ ಕಿಡಿಗಳು ಒಣಗಿದ ಹುಲ್ಲು ಮತ್ತು ಗಿಡ ಗಂಟೆಗಳನ್ನು ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ತಿಳಿಸಿದರು.

ಮುಂಜಾಗ್ರತಾ ಕ್ರಮವಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಮತ್ತು ಅಗ್ನಿಶಾಮಕ ನಡೆದ ಅಧಿಕಾರಿಗಳೊಂದಿಗೆ ಸಭೆಯನ್ನು   ಕ್ಷೇತ್ರ ಮಟ್ಟದಲ್ಲಿ  ನಡೆಸಬೇಕು, ಬೆಂಕಿ ನಂದಿಸುವ ಸಲಕರಣೆಗಳನ್ನು ಮುಂಚಿತವಾಗಿ ಖರೀದಿಸಬೇಕು  ಎಂದು  ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ  ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ  ಆಂಟನಿ ಮರಿಯಪ್ಪ,  ಅಪರ ಜಿಲ್ಲಾಧಿಕಾರಿ  ಡಾ. ಜಿ  ಸಂತೋಷ್ ಕುಮಾರ್ , ಹಾಗೂ ವಿವಿಧ ಇಲಾಖಾಧಿಕಾರಿಗಳು  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

13 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

14 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

24 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

1 day ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

1 day ago