Advertisement
MIRROR FOCUS

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Share

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು  ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.………ಮುಂದೆ ಓದಿ……..

ಜಿಲ್ಲಾಧಿಕಾರಿ  ಮುಲ್ಲೈ  ಮುಹಿಲನ್ ಎಂ ಪಿ  ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ ತುಂಬೆ  ಡ್ಯಾಮ್ ನಲ್ಲಿ   5.70 ಮೀಟರ್ ನೀರು ಇದ್ದು, ಎ ಎಂ ಆರ್ ಅಣೆಕಟ್ಟಿನಲ್ಲಿ  ನೀರಿನ ಮಟ್ಟ 18.9 ಮೀಟರ್ ಇದೆ ಎಂದು ಮಹಾನಗರಪಾಲಿಕೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದಲ್ಲಿ  ಅಥವಾ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಅಧಿಕಾರಿಗಳು ತಮ್ಮ ಹಂತದಲ್ಲಿ ವ್ಯವಸ್ಥಿತವಾಗಿ  ಕ್ರಮವಹಿಸಲು  ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ  ಸ್ಪಂದಿಸಿ ಸಮಸ್ಯೆಗಳನ್ನು  ಪರಿಹರಿಸಲು ಜಿಲ್ಲಾಧಿಕಾರಿ ಸೂಚಿಸಿದರು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕವೂ ನೀರು ಸರಬರಾಜು ಮಾಡಲು ಅವರು ತಿಳಿಸಿದರು. ನಗರ ಪ್ರದೇಶಗಳಲ್ಲಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸರಬರಾಜು ನಿರ್ವಹಣೆ ಮಾಡಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ತಪ್ಪಿಸಲು  ರಸ್ತೆ ಬದಿಗಳ,  ಕಾಡಿನ ಒಳಗಡೆ ಇರುವ ವಿದ್ಯುತ್ ಲೈನ್‍ಗಳು  ಗಾಳಿಗೆ ತಾಗಿಕೊಂಡು ಬೆಂಕಿ ಕಿಡಿ ಹಾರದಂತೆ, ಟ್ರಾನ್ಸ್‍ಫಾರ್ಮರ್‍ಗಳಲ್ಲಿ ಉಂಟಾಗುವ ಬೆಂಕಿಯ ಕಿಡಿಗಳು ಒಣಗಿದ ಹುಲ್ಲು ಮತ್ತು ಗಿಡ ಗಂಟೆಗಳನ್ನು ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ತಿಳಿಸಿದರು.

ಮುಂಜಾಗ್ರತಾ ಕ್ರಮವಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಮತ್ತು ಅಗ್ನಿಶಾಮಕ ನಡೆದ ಅಧಿಕಾರಿಗಳೊಂದಿಗೆ ಸಭೆಯನ್ನು   ಕ್ಷೇತ್ರ ಮಟ್ಟದಲ್ಲಿ  ನಡೆಸಬೇಕು, ಬೆಂಕಿ ನಂದಿಸುವ ಸಲಕರಣೆಗಳನ್ನು ಮುಂಚಿತವಾಗಿ ಖರೀದಿಸಬೇಕು  ಎಂದು  ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ  ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ  ಆಂಟನಿ ಮರಿಯಪ್ಪ,  ಅಪರ ಜಿಲ್ಲಾಧಿಕಾರಿ  ಡಾ. ಜಿ  ಸಂತೋಷ್ ಕುಮಾರ್ , ಹಾಗೂ ವಿವಿಧ ಇಲಾಖಾಧಿಕಾರಿಗಳು  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

6 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

7 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

7 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

14 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago