ಇನ್ನು ಪ್ರವೇಶಿಸದ ಮುಂಗಾರು | ಕರಾವಳಿ ಜಿಲ್ಲೆಯಲ್ಲಿ ನೀರಿನ ಅಭಾವ, ಶಾಲಾ-ಕಾಲೇಜುಗಳಿಗೆ ರಜೆ

June 7, 2023
11:59 AM

ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ ಮಳೆ ಕರಾವಳಿಯ ಕೆಲ ಭಾಗಗಳಲ್ಲಿ ಸುರಿದರು, ಸೆಕೆ ಹೆಚ್ಚಿಸಿದ್ದು ಬಿಟ್ಟರೆ ಹೆಚ್ಚಿನ ಪ್ರಯೋಜನವೇನು ಆಗಿಲ್ಲ. ಈಗ ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ, ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರಿನ ಕೊರತೆ ಉಂಟಾಗಿ ತೊಂದರೆಯಾಗಿದೆ.

ಇನ್ನು ಈಗಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು ನೀರಿನ ಕೊರತೆಯಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆ ಉದ್ಭವವಾದುದರಿಂದ ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿವೆ. ಇನ್ನು ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅರ್ಧ ದಿನ ತರಗತಿ ನಡೆಸುತ್ತಿವೆ. ಕಾಲೇಜು ವಿದ್ಯರ್ಥಿಗಳಿಗೆ ಆನ್​ ಲೈನ್​ ಮೂಲಕ ಪಾಠಗಳನ್ನು ಮಾಡಲಾಗುತ್ತಿದೆ.

ವಿಶೇಷವಾಗಿ ಮಂಗಳೂರು ಉತ್ತರ ಹಾಗೂ ದಕ್ಷಿಣ ವಲಯದ ಶಾಲೆಗಳಿಗೂ ನೀರಿನ ಕೊರೆತೆ ಕಾಣಿಸಿಕೊಂಡಿದ್ದು, ಇಲಾಖೆಯ ಪ್ರಕಾರ ಮೂಲ್ಕಿ ಮೂರು ಶಾಲೆಗಳಿಗೆ ಮತ್ತು ವಿಟ್ಲದ ಒಂದು ಶಾಲೆಯಲ್ಲಿ ವಾರಕ್ಕೊಂದು ಬಾರಿ ಮಾತ್ರ ನೀರು ಪೂರೈಕೆಯಾಗುತ್ತಿದೆ. ಇದರಿಂದ ಮಕ್ಕಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಇನ್ನೊಂದಡೆ ಪಿಯುಸಿ ಹಾಗೂ ಪದವಿ ತರಗತಿಗಳು ಕೂಡ ಆರಂಭವಾಗಿದ್ದು, ಪ್ರಮುಖ ಹಾಸ್ಟೆಲ್‌ಗಳಲ್ಲಿ ನೀರಿನ ಸಮಸ್ಯೆಗಳು ಕಾಣಿಸಿಕೊಂಡಿದೆ. ನಗರದ ಪ್ರಮುಖ ವಿದ್ಯಾಸಂಸ್ಥೆಯಲ್ಲಿ ದಿನವೊಂದಕ್ಕೆ 10 ಟ್ಯಾಂಕರ್‌ ನೀರನ್ನು ಪೂರೈಕೆ ಮಾಡಿಕೊಂಡು ಪರಿಸ್ಥಿತಿ ಸುಧಾರಣೆ ಮಾಡುವ ಕಾರ‍್ಯವಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror