ಸುದ್ದಿಗಳು

ಇನ್ನು ಪ್ರವೇಶಿಸದ ಮುಂಗಾರು | ಕರಾವಳಿ ಜಿಲ್ಲೆಯಲ್ಲಿ ನೀರಿನ ಅಭಾವ, ಶಾಲಾ-ಕಾಲೇಜುಗಳಿಗೆ ರಜೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ ಮಳೆ ಕರಾವಳಿಯ ಕೆಲ ಭಾಗಗಳಲ್ಲಿ ಸುರಿದರು, ಸೆಕೆ ಹೆಚ್ಚಿಸಿದ್ದು ಬಿಟ್ಟರೆ ಹೆಚ್ಚಿನ ಪ್ರಯೋಜನವೇನು ಆಗಿಲ್ಲ. ಈಗ ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ, ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರಿನ ಕೊರತೆ ಉಂಟಾಗಿ ತೊಂದರೆಯಾಗಿದೆ.

Advertisement

ಇನ್ನು ಈಗಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು ನೀರಿನ ಕೊರತೆಯಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆ ಉದ್ಭವವಾದುದರಿಂದ ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿವೆ. ಇನ್ನು ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅರ್ಧ ದಿನ ತರಗತಿ ನಡೆಸುತ್ತಿವೆ. ಕಾಲೇಜು ವಿದ್ಯರ್ಥಿಗಳಿಗೆ ಆನ್​ ಲೈನ್​ ಮೂಲಕ ಪಾಠಗಳನ್ನು ಮಾಡಲಾಗುತ್ತಿದೆ.

ವಿಶೇಷವಾಗಿ ಮಂಗಳೂರು ಉತ್ತರ ಹಾಗೂ ದಕ್ಷಿಣ ವಲಯದ ಶಾಲೆಗಳಿಗೂ ನೀರಿನ ಕೊರೆತೆ ಕಾಣಿಸಿಕೊಂಡಿದ್ದು, ಇಲಾಖೆಯ ಪ್ರಕಾರ ಮೂಲ್ಕಿ ಮೂರು ಶಾಲೆಗಳಿಗೆ ಮತ್ತು ವಿಟ್ಲದ ಒಂದು ಶಾಲೆಯಲ್ಲಿ ವಾರಕ್ಕೊಂದು ಬಾರಿ ಮಾತ್ರ ನೀರು ಪೂರೈಕೆಯಾಗುತ್ತಿದೆ. ಇದರಿಂದ ಮಕ್ಕಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಇನ್ನೊಂದಡೆ ಪಿಯುಸಿ ಹಾಗೂ ಪದವಿ ತರಗತಿಗಳು ಕೂಡ ಆರಂಭವಾಗಿದ್ದು, ಪ್ರಮುಖ ಹಾಸ್ಟೆಲ್‌ಗಳಲ್ಲಿ ನೀರಿನ ಸಮಸ್ಯೆಗಳು ಕಾಣಿಸಿಕೊಂಡಿದೆ. ನಗರದ ಪ್ರಮುಖ ವಿದ್ಯಾಸಂಸ್ಥೆಯಲ್ಲಿ ದಿನವೊಂದಕ್ಕೆ 10 ಟ್ಯಾಂಕರ್‌ ನೀರನ್ನು ಪೂರೈಕೆ ಮಾಡಿಕೊಂಡು ಪರಿಸ್ಥಿತಿ ಸುಧಾರಣೆ ಮಾಡುವ ಕಾರ‍್ಯವಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

3 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

4 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

13 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

14 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

17 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

17 hours ago