Advertisement
ಸುದ್ದಿಗಳು

ಇನ್ನು ಪ್ರವೇಶಿಸದ ಮುಂಗಾರು | ಕರಾವಳಿ ಜಿಲ್ಲೆಯಲ್ಲಿ ನೀರಿನ ಅಭಾವ, ಶಾಲಾ-ಕಾಲೇಜುಗಳಿಗೆ ರಜೆ

Share

ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ ಮಳೆ ಕರಾವಳಿಯ ಕೆಲ ಭಾಗಗಳಲ್ಲಿ ಸುರಿದರು, ಸೆಕೆ ಹೆಚ್ಚಿಸಿದ್ದು ಬಿಟ್ಟರೆ ಹೆಚ್ಚಿನ ಪ್ರಯೋಜನವೇನು ಆಗಿಲ್ಲ. ಈಗ ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ, ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರಿನ ಕೊರತೆ ಉಂಟಾಗಿ ತೊಂದರೆಯಾಗಿದೆ.

ಇನ್ನು ಈಗಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು ನೀರಿನ ಕೊರತೆಯಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆ ಉದ್ಭವವಾದುದರಿಂದ ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿವೆ. ಇನ್ನು ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅರ್ಧ ದಿನ ತರಗತಿ ನಡೆಸುತ್ತಿವೆ. ಕಾಲೇಜು ವಿದ್ಯರ್ಥಿಗಳಿಗೆ ಆನ್​ ಲೈನ್​ ಮೂಲಕ ಪಾಠಗಳನ್ನು ಮಾಡಲಾಗುತ್ತಿದೆ.

ವಿಶೇಷವಾಗಿ ಮಂಗಳೂರು ಉತ್ತರ ಹಾಗೂ ದಕ್ಷಿಣ ವಲಯದ ಶಾಲೆಗಳಿಗೂ ನೀರಿನ ಕೊರೆತೆ ಕಾಣಿಸಿಕೊಂಡಿದ್ದು, ಇಲಾಖೆಯ ಪ್ರಕಾರ ಮೂಲ್ಕಿ ಮೂರು ಶಾಲೆಗಳಿಗೆ ಮತ್ತು ವಿಟ್ಲದ ಒಂದು ಶಾಲೆಯಲ್ಲಿ ವಾರಕ್ಕೊಂದು ಬಾರಿ ಮಾತ್ರ ನೀರು ಪೂರೈಕೆಯಾಗುತ್ತಿದೆ. ಇದರಿಂದ ಮಕ್ಕಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಇನ್ನೊಂದಡೆ ಪಿಯುಸಿ ಹಾಗೂ ಪದವಿ ತರಗತಿಗಳು ಕೂಡ ಆರಂಭವಾಗಿದ್ದು, ಪ್ರಮುಖ ಹಾಸ್ಟೆಲ್‌ಗಳಲ್ಲಿ ನೀರಿನ ಸಮಸ್ಯೆಗಳು ಕಾಣಿಸಿಕೊಂಡಿದೆ. ನಗರದ ಪ್ರಮುಖ ವಿದ್ಯಾಸಂಸ್ಥೆಯಲ್ಲಿ ದಿನವೊಂದಕ್ಕೆ 10 ಟ್ಯಾಂಕರ್‌ ನೀರನ್ನು ಪೂರೈಕೆ ಮಾಡಿಕೊಂಡು ಪರಿಸ್ಥಿತಿ ಸುಧಾರಣೆ ಮಾಡುವ ಕಾರ‍್ಯವಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

8 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

10 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

11 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago