ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ ಮಳೆ ಕರಾವಳಿಯ ಕೆಲ ಭಾಗಗಳಲ್ಲಿ ಸುರಿದರು, ಸೆಕೆ ಹೆಚ್ಚಿಸಿದ್ದು ಬಿಟ್ಟರೆ ಹೆಚ್ಚಿನ ಪ್ರಯೋಜನವೇನು ಆಗಿಲ್ಲ. ಈಗ ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ, ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರಿನ ಕೊರತೆ ಉಂಟಾಗಿ ತೊಂದರೆಯಾಗಿದೆ.
ಇನ್ನು ಈಗಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು ನೀರಿನ ಕೊರತೆಯಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆ ಉದ್ಭವವಾದುದರಿಂದ ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿವೆ. ಇನ್ನು ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅರ್ಧ ದಿನ ತರಗತಿ ನಡೆಸುತ್ತಿವೆ. ಕಾಲೇಜು ವಿದ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಪಾಠಗಳನ್ನು ಮಾಡಲಾಗುತ್ತಿದೆ.
ವಿಶೇಷವಾಗಿ ಮಂಗಳೂರು ಉತ್ತರ ಹಾಗೂ ದಕ್ಷಿಣ ವಲಯದ ಶಾಲೆಗಳಿಗೂ ನೀರಿನ ಕೊರೆತೆ ಕಾಣಿಸಿಕೊಂಡಿದ್ದು, ಇಲಾಖೆಯ ಪ್ರಕಾರ ಮೂಲ್ಕಿ ಮೂರು ಶಾಲೆಗಳಿಗೆ ಮತ್ತು ವಿಟ್ಲದ ಒಂದು ಶಾಲೆಯಲ್ಲಿ ವಾರಕ್ಕೊಂದು ಬಾರಿ ಮಾತ್ರ ನೀರು ಪೂರೈಕೆಯಾಗುತ್ತಿದೆ. ಇದರಿಂದ ಮಕ್ಕಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.
ಇನ್ನೊಂದಡೆ ಪಿಯುಸಿ ಹಾಗೂ ಪದವಿ ತರಗತಿಗಳು ಕೂಡ ಆರಂಭವಾಗಿದ್ದು, ಪ್ರಮುಖ ಹಾಸ್ಟೆಲ್ಗಳಲ್ಲಿ ನೀರಿನ ಸಮಸ್ಯೆಗಳು ಕಾಣಿಸಿಕೊಂಡಿದೆ. ನಗರದ ಪ್ರಮುಖ ವಿದ್ಯಾಸಂಸ್ಥೆಯಲ್ಲಿ ದಿನವೊಂದಕ್ಕೆ 10 ಟ್ಯಾಂಕರ್ ನೀರನ್ನು ಪೂರೈಕೆ ಮಾಡಿಕೊಂಡು ಪರಿಸ್ಥಿತಿ ಸುಧಾರಣೆ ಮಾಡುವ ಕಾರ್ಯವಾಗುತ್ತಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…