Advertisement
The Rural Mirror ವಾರದ ವಿಶೇಷ

ಯೋಚನೆಯೇ ಇಲ್ಲದ ಯೋಜನೆ ..! : 7 ವರ್ಷವಾದರೂ ಟ್ಯಾಂಕ್‌ ಗೆ ನೀರು ಬರುತ್ತಿಲ್ಲ…!

Share

Advertisement
Advertisement

ಯಾವುದೇ ಯೋಜನೆ ತಯಾರು ಮಾಡುವ ಮುನ್ನ ಲೆಕ್ಕಾಚಾರ ನಡೆಯುತ್ತದೆ. ಅಂತಹ ಯೋಚನೆಯೇ ಇಲ್ಲದೆ ತಯಾರಾದ ಯೋಜನೆಗಳು ಏನಾಗುತ್ತವೆ ? ಮತ್ತಿನ್ನೇನು ಹಳ್ಳ ಹಡಿಯುತ್ತವೆ. ಅದಕ್ಕೊಂದು ಉದಾಹರಣೆ ಸುಳ್ಯ ತಾಲೂಕಿನ ಪಂಜದ ಬಳಿಯ ಅಳ್ಪೆ ಸಿಂಗಾಣಿ ಗುಡ್ಡೆಯ ನೀರಿನ ಟ್ಯಾಂಕ್.‌ 7 ವರ್ಷಗಳ ಹಿಂದೆ ರಚನೆಯಾದ ನೀರಿನ ಟ್ಯಾಂಕ್‌ ಗೆ ಇಂದಿಗೂ ನೀರು ಬಂದಿಲ್ಲ..!. 

ಸುಳ್ಯ ತಾಲೂಕಿನ ಪಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  ಬರುವ ಅಳ್ಪೆ ಸಿಂಗಾಣಿ ಗುಡ್ಡೆಯಲ್ಲಿ  ನೀರಿನ ಸಮಸ್ಯೆ ಇತ್ತು. ಇದಕ್ಕಾಗಿ ಜಿಲ್ಲಾ ಪಂಚಾಯತ್‌ ಯೋಜನೆಯ ಮೂಲಕ ವಿಶ್ವ ಬ್ಯಾಂಕ್‌ ಯೋಜನೆಯಲ್ಲಿ  ನೀರಿನ ಟ್ಯಾಂಕ್‌ ರಚನೆ ಮಾಡಲಾಯಿತು. ಬಹುಗ್ರಾಮ ಕುಡಿಯುವ ನೀರು ಎಂಬ ಯೋಜನೆಯ ಅಡಿಯಲ್ಲಿ  ಬೃಹತ್‌ ಟ್ಯಾಂಕ್‌ ನಿರ್ಮಾಣವಾಗಿ  7  ವರ್ಷ ಕಳೆಯಿತು. ಇಂದಿಗೂ ಟ್ಯಾಂಕ್‌ ಗೆ ನೀರು ಬಂದಿಲ್ಲ, ಆಸುಪಾಸಿನ ಜನರಿಗೆ ನೀರಿನ ಭಾಗ್ಯವೇ ದಕ್ಕಿಲ್ಲ. ಅಂದ ಹಾಗೆ ಈ ಯೋಜನೆಗೆ ಸುಮಾರು  4.5 ಕಿಮೀ ದೂರದ ಕುಮಾರಧಾರಾ ನದಿಯಿಂದ 10 ಎಚ್‌ ಪಿ ಪಂಪ್‌ ಮೂಲಕ ನೀರು ಹಾಯಿಸಿ ಜನರಿಗೆ ನೀರು ನೀಡುವ ಯೋಜನೆ ಇದಾಗಿತ್ತು. ಆದರೆ ಯಾವುದೂ ಕೈಗೂಡಲಿಲ್ಲ.ಹಲವು ಬಾರಿ ಪ್ರಯತ್ನ ಮಾಡಿದರೂ ವಿಫಲವಾಗಿತ್ತು. ಕಾರಣ ಟ್ಯಾಂಕ್‌ ಗೆ ನೀರು ಬರುವುದಿಲ್ಲ…!. ಒಂದು ಯೋಜನೆ ಮಾಡುವ ವೇಳೆ ಇಂಜಿನಿಯರ್‌ ಇದ್ದು ಲೆಕ್ಕಾಚಾರ ನಡೆಯುತ್ತದೆ . ನೀರು ಟ್ಯಾಂಕ್ ಗೆ ಬರಬಹುದೇ ? ಬರದೇ ಇದ್ದರೆ ಏನು ವ್ಯವಸ್ಥೆ ಇತ್ಯಾದಿ. ಆದರೆ ಕೋಟಿ ಅನುದಾನ ಬಂದ ಕೂಡಲೇ ಟ್ಯಾಂಕ್‌ ರಚನೆಯಾಗಿ ಕುಳಿತಿದೆ, 7  ವರ್ಷ ಕಳೆಯುವ ಹೊತ್ತಿಗೆ ಟ್ಯಾಂಕ್‌ನಲ್ಲಿ ನೀರಿಲ್ಲದೆ ಟ್ಯಾಂಕ್‌ ಒಡೆಯಲು ಆರಂಭವಾಗಿದೆ. ಈಗ ನಷ್ಟ ಯಾರಿಗೆ ? ಹಣ ಎಲ್ಲಿಂದ ? ಈ ಪ್ರಶ್ನೆ ಕೇಳುವವರು ಯಾರು ? .

ಇದಕ್ಕಾಗಿಯೇ ಕಳೆದ ಬಾರಿ ಗ್ರಾ ಪಂ ಚುನಾವಣೆಯ ಸಂದರ್ಭ ಮತಬಹಿಷ್ಕಾರದ ಬದಲು ಸಾರ್ವಜನಿಕರೇ ಚುನಾವಣೆಗೂ ಸ್ಫರ್ಧೆ ಮಾಡಿದ್ದರು.  ಹೀಗಾದರೂ ಆಡಳಿತ ಪಕ್ಷಗಳು, ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡುತ್ತಿಲ್ಲ, ಸಮಸ್ಯೆ ಪರಿಹಾರದ ಕಡೆಗೆ ಮುಖ ಮಾಡುತ್ತಿಲ್ಲ.  ಪ್ರತಿಷ್ಟೆ ಹಾಗೂ ಚುನಾವಣೆಗೆ ಸ್ಫರ್ಧೆ ಮಾಡಿದವರೇ ಮಾಡಲಿ ಎನ್ನುವ ಅಹಂಭಾವವೇ ಹೆಚ್ಚಾಗುತ್ತಿದೆ ಎನ್ನುವ ಮಾತುಗಳು ಈಗ ಚರ್ಚೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

6 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

6 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago