Advertisement
The Rural Mirror ವಾರದ ವಿಶೇಷ

ಯೋಚನೆಯೇ ಇಲ್ಲದ ಯೋಜನೆ ..! : 7 ವರ್ಷವಾದರೂ ಟ್ಯಾಂಕ್‌ ಗೆ ನೀರು ಬರುತ್ತಿಲ್ಲ…!

Share

Advertisement
Advertisement

ಯಾವುದೇ ಯೋಜನೆ ತಯಾರು ಮಾಡುವ ಮುನ್ನ ಲೆಕ್ಕಾಚಾರ ನಡೆಯುತ್ತದೆ. ಅಂತಹ ಯೋಚನೆಯೇ ಇಲ್ಲದೆ ತಯಾರಾದ ಯೋಜನೆಗಳು ಏನಾಗುತ್ತವೆ ? ಮತ್ತಿನ್ನೇನು ಹಳ್ಳ ಹಡಿಯುತ್ತವೆ. ಅದಕ್ಕೊಂದು ಉದಾಹರಣೆ ಸುಳ್ಯ ತಾಲೂಕಿನ ಪಂಜದ ಬಳಿಯ ಅಳ್ಪೆ ಸಿಂಗಾಣಿ ಗುಡ್ಡೆಯ ನೀರಿನ ಟ್ಯಾಂಕ್.‌ 7 ವರ್ಷಗಳ ಹಿಂದೆ ರಚನೆಯಾದ ನೀರಿನ ಟ್ಯಾಂಕ್‌ ಗೆ ಇಂದಿಗೂ ನೀರು ಬಂದಿಲ್ಲ..!. 

Advertisement

ಸುಳ್ಯ ತಾಲೂಕಿನ ಪಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  ಬರುವ ಅಳ್ಪೆ ಸಿಂಗಾಣಿ ಗುಡ್ಡೆಯಲ್ಲಿ  ನೀರಿನ ಸಮಸ್ಯೆ ಇತ್ತು. ಇದಕ್ಕಾಗಿ ಜಿಲ್ಲಾ ಪಂಚಾಯತ್‌ ಯೋಜನೆಯ ಮೂಲಕ ವಿಶ್ವ ಬ್ಯಾಂಕ್‌ ಯೋಜನೆಯಲ್ಲಿ  ನೀರಿನ ಟ್ಯಾಂಕ್‌ ರಚನೆ ಮಾಡಲಾಯಿತು. ಬಹುಗ್ರಾಮ ಕುಡಿಯುವ ನೀರು ಎಂಬ ಯೋಜನೆಯ ಅಡಿಯಲ್ಲಿ  ಬೃಹತ್‌ ಟ್ಯಾಂಕ್‌ ನಿರ್ಮಾಣವಾಗಿ  7  ವರ್ಷ ಕಳೆಯಿತು. ಇಂದಿಗೂ ಟ್ಯಾಂಕ್‌ ಗೆ ನೀರು ಬಂದಿಲ್ಲ, ಆಸುಪಾಸಿನ ಜನರಿಗೆ ನೀರಿನ ಭಾಗ್ಯವೇ ದಕ್ಕಿಲ್ಲ. ಅಂದ ಹಾಗೆ ಈ ಯೋಜನೆಗೆ ಸುಮಾರು  4.5 ಕಿಮೀ ದೂರದ ಕುಮಾರಧಾರಾ ನದಿಯಿಂದ 10 ಎಚ್‌ ಪಿ ಪಂಪ್‌ ಮೂಲಕ ನೀರು ಹಾಯಿಸಿ ಜನರಿಗೆ ನೀರು ನೀಡುವ ಯೋಜನೆ ಇದಾಗಿತ್ತು. ಆದರೆ ಯಾವುದೂ ಕೈಗೂಡಲಿಲ್ಲ.ಹಲವು ಬಾರಿ ಪ್ರಯತ್ನ ಮಾಡಿದರೂ ವಿಫಲವಾಗಿತ್ತು. ಕಾರಣ ಟ್ಯಾಂಕ್‌ ಗೆ ನೀರು ಬರುವುದಿಲ್ಲ…!. ಒಂದು ಯೋಜನೆ ಮಾಡುವ ವೇಳೆ ಇಂಜಿನಿಯರ್‌ ಇದ್ದು ಲೆಕ್ಕಾಚಾರ ನಡೆಯುತ್ತದೆ . ನೀರು ಟ್ಯಾಂಕ್ ಗೆ ಬರಬಹುದೇ ? ಬರದೇ ಇದ್ದರೆ ಏನು ವ್ಯವಸ್ಥೆ ಇತ್ಯಾದಿ. ಆದರೆ ಕೋಟಿ ಅನುದಾನ ಬಂದ ಕೂಡಲೇ ಟ್ಯಾಂಕ್‌ ರಚನೆಯಾಗಿ ಕುಳಿತಿದೆ, 7  ವರ್ಷ ಕಳೆಯುವ ಹೊತ್ತಿಗೆ ಟ್ಯಾಂಕ್‌ನಲ್ಲಿ ನೀರಿಲ್ಲದೆ ಟ್ಯಾಂಕ್‌ ಒಡೆಯಲು ಆರಂಭವಾಗಿದೆ. ಈಗ ನಷ್ಟ ಯಾರಿಗೆ ? ಹಣ ಎಲ್ಲಿಂದ ? ಈ ಪ್ರಶ್ನೆ ಕೇಳುವವರು ಯಾರು ? .

ಇದಕ್ಕಾಗಿಯೇ ಕಳೆದ ಬಾರಿ ಗ್ರಾ ಪಂ ಚುನಾವಣೆಯ ಸಂದರ್ಭ ಮತಬಹಿಷ್ಕಾರದ ಬದಲು ಸಾರ್ವಜನಿಕರೇ ಚುನಾವಣೆಗೂ ಸ್ಫರ್ಧೆ ಮಾಡಿದ್ದರು.  ಹೀಗಾದರೂ ಆಡಳಿತ ಪಕ್ಷಗಳು, ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡುತ್ತಿಲ್ಲ, ಸಮಸ್ಯೆ ಪರಿಹಾರದ ಕಡೆಗೆ ಮುಖ ಮಾಡುತ್ತಿಲ್ಲ.  ಪ್ರತಿಷ್ಟೆ ಹಾಗೂ ಚುನಾವಣೆಗೆ ಸ್ಫರ್ಧೆ ಮಾಡಿದವರೇ ಮಾಡಲಿ ಎನ್ನುವ ಅಹಂಭಾವವೇ ಹೆಚ್ಚಾಗುತ್ತಿದೆ ಎನ್ನುವ ಮಾತುಗಳು ಈಗ ಚರ್ಚೆಯಾಗುತ್ತಿದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |

ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...

5 hours ago

ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |

ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…

5 hours ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |

ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…

5 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ | ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ |

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

6 hours ago

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…

6 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

8 hours ago