Advertisement
The Rural Mirror ವಾರದ ವಿಶೇಷ

ಯೋಚನೆಯೇ ಇಲ್ಲದ ಯೋಜನೆ ..! : 7 ವರ್ಷವಾದರೂ ಟ್ಯಾಂಕ್‌ ಗೆ ನೀರು ಬರುತ್ತಿಲ್ಲ…!

Share

ಯಾವುದೇ ಯೋಜನೆ ತಯಾರು ಮಾಡುವ ಮುನ್ನ ಲೆಕ್ಕಾಚಾರ ನಡೆಯುತ್ತದೆ. ಅಂತಹ ಯೋಚನೆಯೇ ಇಲ್ಲದೆ ತಯಾರಾದ ಯೋಜನೆಗಳು ಏನಾಗುತ್ತವೆ ? ಮತ್ತಿನ್ನೇನು ಹಳ್ಳ ಹಡಿಯುತ್ತವೆ. ಅದಕ್ಕೊಂದು ಉದಾಹರಣೆ ಸುಳ್ಯ ತಾಲೂಕಿನ ಪಂಜದ ಬಳಿಯ ಅಳ್ಪೆ ಸಿಂಗಾಣಿ ಗುಡ್ಡೆಯ ನೀರಿನ ಟ್ಯಾಂಕ್.‌ 7 ವರ್ಷಗಳ ಹಿಂದೆ ರಚನೆಯಾದ ನೀರಿನ ಟ್ಯಾಂಕ್‌ ಗೆ ಇಂದಿಗೂ ನೀರು ಬಂದಿಲ್ಲ..!. 

ಸುಳ್ಯ ತಾಲೂಕಿನ ಪಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  ಬರುವ ಅಳ್ಪೆ ಸಿಂಗಾಣಿ ಗುಡ್ಡೆಯಲ್ಲಿ  ನೀರಿನ ಸಮಸ್ಯೆ ಇತ್ತು. ಇದಕ್ಕಾಗಿ ಜಿಲ್ಲಾ ಪಂಚಾಯತ್‌ ಯೋಜನೆಯ ಮೂಲಕ ವಿಶ್ವ ಬ್ಯಾಂಕ್‌ ಯೋಜನೆಯಲ್ಲಿ  ನೀರಿನ ಟ್ಯಾಂಕ್‌ ರಚನೆ ಮಾಡಲಾಯಿತು. ಬಹುಗ್ರಾಮ ಕುಡಿಯುವ ನೀರು ಎಂಬ ಯೋಜನೆಯ ಅಡಿಯಲ್ಲಿ  ಬೃಹತ್‌ ಟ್ಯಾಂಕ್‌ ನಿರ್ಮಾಣವಾಗಿ  7  ವರ್ಷ ಕಳೆಯಿತು. ಇಂದಿಗೂ ಟ್ಯಾಂಕ್‌ ಗೆ ನೀರು ಬಂದಿಲ್ಲ, ಆಸುಪಾಸಿನ ಜನರಿಗೆ ನೀರಿನ ಭಾಗ್ಯವೇ ದಕ್ಕಿಲ್ಲ. ಅಂದ ಹಾಗೆ ಈ ಯೋಜನೆಗೆ ಸುಮಾರು  4.5 ಕಿಮೀ ದೂರದ ಕುಮಾರಧಾರಾ ನದಿಯಿಂದ 10 ಎಚ್‌ ಪಿ ಪಂಪ್‌ ಮೂಲಕ ನೀರು ಹಾಯಿಸಿ ಜನರಿಗೆ ನೀರು ನೀಡುವ ಯೋಜನೆ ಇದಾಗಿತ್ತು. ಆದರೆ ಯಾವುದೂ ಕೈಗೂಡಲಿಲ್ಲ.ಹಲವು ಬಾರಿ ಪ್ರಯತ್ನ ಮಾಡಿದರೂ ವಿಫಲವಾಗಿತ್ತು. ಕಾರಣ ಟ್ಯಾಂಕ್‌ ಗೆ ನೀರು ಬರುವುದಿಲ್ಲ…!. ಒಂದು ಯೋಜನೆ ಮಾಡುವ ವೇಳೆ ಇಂಜಿನಿಯರ್‌ ಇದ್ದು ಲೆಕ್ಕಾಚಾರ ನಡೆಯುತ್ತದೆ . ನೀರು ಟ್ಯಾಂಕ್ ಗೆ ಬರಬಹುದೇ ? ಬರದೇ ಇದ್ದರೆ ಏನು ವ್ಯವಸ್ಥೆ ಇತ್ಯಾದಿ. ಆದರೆ ಕೋಟಿ ಅನುದಾನ ಬಂದ ಕೂಡಲೇ ಟ್ಯಾಂಕ್‌ ರಚನೆಯಾಗಿ ಕುಳಿತಿದೆ, 7  ವರ್ಷ ಕಳೆಯುವ ಹೊತ್ತಿಗೆ ಟ್ಯಾಂಕ್‌ನಲ್ಲಿ ನೀರಿಲ್ಲದೆ ಟ್ಯಾಂಕ್‌ ಒಡೆಯಲು ಆರಂಭವಾಗಿದೆ. ಈಗ ನಷ್ಟ ಯಾರಿಗೆ ? ಹಣ ಎಲ್ಲಿಂದ ? ಈ ಪ್ರಶ್ನೆ ಕೇಳುವವರು ಯಾರು ? .

ಇದಕ್ಕಾಗಿಯೇ ಕಳೆದ ಬಾರಿ ಗ್ರಾ ಪಂ ಚುನಾವಣೆಯ ಸಂದರ್ಭ ಮತಬಹಿಷ್ಕಾರದ ಬದಲು ಸಾರ್ವಜನಿಕರೇ ಚುನಾವಣೆಗೂ ಸ್ಫರ್ಧೆ ಮಾಡಿದ್ದರು.  ಹೀಗಾದರೂ ಆಡಳಿತ ಪಕ್ಷಗಳು, ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡುತ್ತಿಲ್ಲ, ಸಮಸ್ಯೆ ಪರಿಹಾರದ ಕಡೆಗೆ ಮುಖ ಮಾಡುತ್ತಿಲ್ಲ.  ಪ್ರತಿಷ್ಟೆ ಹಾಗೂ ಚುನಾವಣೆಗೆ ಸ್ಫರ್ಧೆ ಮಾಡಿದವರೇ ಮಾಡಲಿ ಎನ್ನುವ ಅಹಂಭಾವವೇ ಹೆಚ್ಚಾಗುತ್ತಿದೆ ಎನ್ನುವ ಮಾತುಗಳು ಈಗ ಚರ್ಚೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

5 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

13 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

22 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago