Advertisement
The Rural Mirror ವಾರದ ವಿಶೇಷ

ಯೋಚನೆಯೇ ಇಲ್ಲದ ಯೋಜನೆ ..! : 7 ವರ್ಷವಾದರೂ ಟ್ಯಾಂಕ್‌ ಗೆ ನೀರು ಬರುತ್ತಿಲ್ಲ…!

Share

ಯಾವುದೇ ಯೋಜನೆ ತಯಾರು ಮಾಡುವ ಮುನ್ನ ಲೆಕ್ಕಾಚಾರ ನಡೆಯುತ್ತದೆ. ಅಂತಹ ಯೋಚನೆಯೇ ಇಲ್ಲದೆ ತಯಾರಾದ ಯೋಜನೆಗಳು ಏನಾಗುತ್ತವೆ ? ಮತ್ತಿನ್ನೇನು ಹಳ್ಳ ಹಡಿಯುತ್ತವೆ. ಅದಕ್ಕೊಂದು ಉದಾಹರಣೆ ಸುಳ್ಯ ತಾಲೂಕಿನ ಪಂಜದ ಬಳಿಯ ಅಳ್ಪೆ ಸಿಂಗಾಣಿ ಗುಡ್ಡೆಯ ನೀರಿನ ಟ್ಯಾಂಕ್.‌ 7 ವರ್ಷಗಳ ಹಿಂದೆ ರಚನೆಯಾದ ನೀರಿನ ಟ್ಯಾಂಕ್‌ ಗೆ ಇಂದಿಗೂ ನೀರು ಬಂದಿಲ್ಲ..!. 

ಸುಳ್ಯ ತಾಲೂಕಿನ ಪಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  ಬರುವ ಅಳ್ಪೆ ಸಿಂಗಾಣಿ ಗುಡ್ಡೆಯಲ್ಲಿ  ನೀರಿನ ಸಮಸ್ಯೆ ಇತ್ತು. ಇದಕ್ಕಾಗಿ ಜಿಲ್ಲಾ ಪಂಚಾಯತ್‌ ಯೋಜನೆಯ ಮೂಲಕ ವಿಶ್ವ ಬ್ಯಾಂಕ್‌ ಯೋಜನೆಯಲ್ಲಿ  ನೀರಿನ ಟ್ಯಾಂಕ್‌ ರಚನೆ ಮಾಡಲಾಯಿತು. ಬಹುಗ್ರಾಮ ಕುಡಿಯುವ ನೀರು ಎಂಬ ಯೋಜನೆಯ ಅಡಿಯಲ್ಲಿ  ಬೃಹತ್‌ ಟ್ಯಾಂಕ್‌ ನಿರ್ಮಾಣವಾಗಿ  7  ವರ್ಷ ಕಳೆಯಿತು. ಇಂದಿಗೂ ಟ್ಯಾಂಕ್‌ ಗೆ ನೀರು ಬಂದಿಲ್ಲ, ಆಸುಪಾಸಿನ ಜನರಿಗೆ ನೀರಿನ ಭಾಗ್ಯವೇ ದಕ್ಕಿಲ್ಲ. ಅಂದ ಹಾಗೆ ಈ ಯೋಜನೆಗೆ ಸುಮಾರು  4.5 ಕಿಮೀ ದೂರದ ಕುಮಾರಧಾರಾ ನದಿಯಿಂದ 10 ಎಚ್‌ ಪಿ ಪಂಪ್‌ ಮೂಲಕ ನೀರು ಹಾಯಿಸಿ ಜನರಿಗೆ ನೀರು ನೀಡುವ ಯೋಜನೆ ಇದಾಗಿತ್ತು. ಆದರೆ ಯಾವುದೂ ಕೈಗೂಡಲಿಲ್ಲ.ಹಲವು ಬಾರಿ ಪ್ರಯತ್ನ ಮಾಡಿದರೂ ವಿಫಲವಾಗಿತ್ತು. ಕಾರಣ ಟ್ಯಾಂಕ್‌ ಗೆ ನೀರು ಬರುವುದಿಲ್ಲ…!. ಒಂದು ಯೋಜನೆ ಮಾಡುವ ವೇಳೆ ಇಂಜಿನಿಯರ್‌ ಇದ್ದು ಲೆಕ್ಕಾಚಾರ ನಡೆಯುತ್ತದೆ . ನೀರು ಟ್ಯಾಂಕ್ ಗೆ ಬರಬಹುದೇ ? ಬರದೇ ಇದ್ದರೆ ಏನು ವ್ಯವಸ್ಥೆ ಇತ್ಯಾದಿ. ಆದರೆ ಕೋಟಿ ಅನುದಾನ ಬಂದ ಕೂಡಲೇ ಟ್ಯಾಂಕ್‌ ರಚನೆಯಾಗಿ ಕುಳಿತಿದೆ, 7  ವರ್ಷ ಕಳೆಯುವ ಹೊತ್ತಿಗೆ ಟ್ಯಾಂಕ್‌ನಲ್ಲಿ ನೀರಿಲ್ಲದೆ ಟ್ಯಾಂಕ್‌ ಒಡೆಯಲು ಆರಂಭವಾಗಿದೆ. ಈಗ ನಷ್ಟ ಯಾರಿಗೆ ? ಹಣ ಎಲ್ಲಿಂದ ? ಈ ಪ್ರಶ್ನೆ ಕೇಳುವವರು ಯಾರು ? .

ಇದಕ್ಕಾಗಿಯೇ ಕಳೆದ ಬಾರಿ ಗ್ರಾ ಪಂ ಚುನಾವಣೆಯ ಸಂದರ್ಭ ಮತಬಹಿಷ್ಕಾರದ ಬದಲು ಸಾರ್ವಜನಿಕರೇ ಚುನಾವಣೆಗೂ ಸ್ಫರ್ಧೆ ಮಾಡಿದ್ದರು.  ಹೀಗಾದರೂ ಆಡಳಿತ ಪಕ್ಷಗಳು, ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡುತ್ತಿಲ್ಲ, ಸಮಸ್ಯೆ ಪರಿಹಾರದ ಕಡೆಗೆ ಮುಖ ಮಾಡುತ್ತಿಲ್ಲ.  ಪ್ರತಿಷ್ಟೆ ಹಾಗೂ ಚುನಾವಣೆಗೆ ಸ್ಫರ್ಧೆ ಮಾಡಿದವರೇ ಮಾಡಲಿ ಎನ್ನುವ ಅಹಂಭಾವವೇ ಹೆಚ್ಚಾಗುತ್ತಿದೆ ಎನ್ನುವ ಮಾತುಗಳು ಈಗ ಚರ್ಚೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

42 minutes ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

49 minutes ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

1 hour ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

1 hour ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

18 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago