ಬಿಸಿಲ ಬೇಗೆಗೆ ವನ್ಯ ಜೀವಿಗಳು ಪರಿತಪಿಸುತ್ತಿವೆ. ಬಿಸಿಲ ನಾಡು ಬೀದರ್, ಗುಲ್ಬಾರ್ಗಾ, ಯಾದಗಿರಿ, ಬಿಜಾಪುರ ಜಿಲ್ಲೆಗಳಲ್ಲಿ ಈವರೆಗೆ ಮಳೆಯಾಗಿಲ್ಲ. ಜನತೆ ಹೇಗೂ ಮಾಡಿ ಅಲ್ಲಿ ಇಲ್ಲಿ ಹುಡುಕಿ ನೀರು ತಂದು ಜೀವಿಸುತ್ತಾರೆ. ಆದರೆ ಕಾಡು ಪ್ರಾಣಿಗಳ ಕಥೆ ಹೇಳತೀರದು. ಪ್ರಾಣಿಗಳ ವಾಸ ಸ್ಥಾನಕ್ಕೆ ಸಂಚಕಾರ ತಂದ ಮನುಜನೇ ಇದಕ್ಕೆ ಪರಿಹಾರ ಒದಗಿಸಬೇಕು. ಬೀದರ್ ನ ಕೆಲ ಯುವಕರ ತಂಡ ಇಂತಹ ಒಳ್ಳೆ ಕೆಲಸಕ್ಕೆ ಕೈ ಹಾಕಿ ಸೈ ಎನಿಸಿಕೊಂಡಿದ್ದಾರೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲ ಆರ್ಭಟ ಜಾಸ್ತಿ ಏರುತ್ತಲೇ ಇದೆ. ಈ ಬಿಸಿಲಿನ ಬೇಗೆಗೆ ಕೇವಲ ಜನ ಮಾತ್ರವಲ್ಲ ಪ್ರಾಣೀ-ಪಕ್ಷಿಗಳು ಸಹ ಇದರಿಂದ ಸಮಸ್ಯೆ ಅನುಭವಿಸುತ್ತಿವೆ. ಅದರಲ್ಲೂ ಗಡಿ ನಾಡಿನ ಜಿಲ್ಲೆಗಳಲ್ಲಿ ಜನ ಹಾಗೂ ಜಾನುವಾರುಗಳು ಪರದಾಡುತ್ತಿವೆ.
ಗಡಿಜಿಲ್ಲೆ ಬೀದರ್ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಜನರಂತೂ ಯಾವಾಗ ಈ ಬೇಸಿಗೆ ಮುಗಿಯುತ್ತದೆ ಎಂದು ಕಾದು ಕುಳಿತಿದ್ದಾರೆ. ಹಾಗೆಯೇ, ಅವರು ತಮ್ಮ ಕೈಲಾದಷ್ಟು ಬೇಸಿಗೆಯ ಬೇಗಿಯಿಂದ ತಪ್ಪಿಸಿಕೊಳ್ಳಲು ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ ಪ್ರಾಣಿ-ಪಕ್ಷಿಗಳೇನು ಮಾಡಲು ಸಾಧ್ಯ?.
ಈ ತಂಡದ ಯುವಕರ ಪ್ರಕಾರ ಈ ಕಾಡಿನಲ್ಲಿ ಕೋತಿ, ಜಿಂಕೆ, ನವಿಲು, ಹಾವು, ಮುಂಗುಸಿ ಸೇರಿದಂತೆ ವಿವಿಧ ಜಾತಿಯ ಪ್ರಾಣಿ ಪಕ್ಷಿಗಳು ಇರುತ್ತವೆ. ಬೇಸಿಗೆಯಲ್ಲಿ ಅವುಗಳು ನೀರಿನ ಸಮಸ್ಯೆಯನ್ನು ಅನುಭವಿಸುತ್ತವೆ. ಅವುಗಳ ಈ ಸಮಸ್ಯೆ ಹೋಗಲಾಡಿಸುವುದು ನಮ್ಮ ಕರ್ತವ್ಯ. ಹಾಗಾಗಿ ಪ್ರತಿನಿತ್ಯ ತೊಟ್ಟಿಗೆ ನೀರು ಹಾಕುತ್ತಾರೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…