Advertisement
ಸುದ್ದಿಗಳು

ಬಿಸಿಲ ಬೇಗೆಗೆ ಬಸವಳಿದ ವನ್ಯ ಜೀವಿಗಳು| ಪ್ರಾಣಿ-ಪಕ್ಷಿಗಳಿಗಾಗಿ ನೀರಿನ ತೊಟ್ಟಿ ನಿರ್ಮಿಸಿದ ಯುವಕರು | ಯುವಕರಿಂದ ಮಾದರಿ ಕೆಲಸ

Share

ಬಿಸಿಲ ಬೇಗೆಗೆ ವನ್ಯ ಜೀವಿಗಳು ಪರಿತಪಿಸುತ್ತಿವೆ. ಬಿಸಿಲ ನಾಡು ಬೀದರ್, ಗುಲ್ಬಾರ್ಗಾ, ಯಾದಗಿರಿ, ಬಿಜಾಪುರ ಜಿಲ್ಲೆಗಳಲ್ಲಿ ಈವರೆಗೆ ಮಳೆಯಾಗಿಲ್ಲ. ಜನತೆ ಹೇಗೂ ಮಾಡಿ ಅಲ್ಲಿ ಇಲ್ಲಿ ಹುಡುಕಿ ನೀರು ತಂದು ಜೀವಿಸುತ್ತಾರೆ. ಆದರೆ ಕಾಡು ಪ್ರಾಣಿಗಳ ಕಥೆ ಹೇಳತೀರದು. ಪ್ರಾಣಿಗಳ ವಾಸ ಸ್ಥಾನಕ್ಕೆ ಸಂಚಕಾರ ತಂದ ಮನುಜನೇ ಇದಕ್ಕೆ ಪರಿಹಾರ ಒದಗಿಸಬೇಕು.  ಬೀದರ್ ನ ಕೆಲ ಯುವಕರ ತಂಡ ಇಂತಹ ಒಳ್ಳೆ ಕೆಲಸಕ್ಕೆ ಕೈ ಹಾಕಿ ಸೈ ಎನಿಸಿಕೊಂಡಿದ್ದಾರೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲ ಆರ್ಭಟ  ಜಾಸ್ತಿ ಏರುತ್ತಲೇ ಇದೆ.  ಈ ಬಿಸಿಲಿನ ಬೇಗೆಗೆ ಕೇವಲ ಜನ ಮಾತ್ರವಲ್ಲ ಪ್ರಾಣೀ-ಪಕ್ಷಿಗಳು ಸಹ ಇದರಿಂದ ಸಮಸ್ಯೆ ಅನುಭವಿಸುತ್ತಿವೆ. ಅದರಲ್ಲೂ ಗಡಿ ನಾಡಿನ ಜಿಲ್ಲೆಗಳಲ್ಲಿ ಜನ ಹಾಗೂ ಜಾನುವಾರುಗಳು ಪರದಾಡುತ್ತಿವೆ.

ಗಡಿಜಿಲ್ಲೆ ಬೀದರ್‌ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಜನರಂತೂ ಯಾವಾಗ ಈ ಬೇಸಿಗೆ ಮುಗಿಯುತ್ತದೆ ಎಂದು  ಕಾದು ಕುಳಿತಿದ್ದಾರೆ.  ಹಾಗೆಯೇ, ಅವರು ತಮ್ಮ ಕೈಲಾದಷ್ಟು ಬೇಸಿಗೆಯ ಬೇಗಿಯಿಂದ ತಪ್ಪಿಸಿಕೊಳ್ಳಲು ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ ಪ್ರಾಣಿ-ಪಕ್ಷಿಗಳೇನು ಮಾಡಲು ಸಾಧ್ಯ?.

ಪ್ರಾಣಿ-ಪಕ್ಷಿಗಳು ಕಾಡಿನಲ್ಲಿ ಸಂಚಾರ ಮಾಡುವಾಗ ನೀರಿನ ಸಮಸ್ಯೆ ಆಗಬಾರದು ಎಂಬ ಉತ್ತಮ ಉದ್ದೇಶದೊಂದಿಗೆ ಈ ಕೆಲಸವನ್ನು ಮಾಡಿದ್ದು, ಜಿಲ್ಲೆಯ ಶಹಾಪುರ, ಅಮಲಾಪುರ, ನಾಗೂರ, ನಿರ್ಣಾ ಗ್ರಾಮದ ಬಳಿ‌ ಇರುವ ಮೀಸಲು ಅರಣ್ಯ ಪ್ರದೇಶದಲ್ಲಿ ತೊಟ್ಟಿ ನಿರ್ಮಾಣ ಮಾಡಲಾಗಿದೆ.

ಈ ತಂಡದ ಯುವಕರ ಪ್ರಕಾರ ಈ ಕಾಡಿನಲ್ಲಿ ಕೋತಿ, ಜಿಂಕೆ, ನವಿಲು, ಹಾವು, ಮುಂಗುಸಿ ಸೇರಿದಂತೆ ವಿವಿಧ ಜಾತಿಯ ಪ್ರಾಣಿ ಪಕ್ಷಿಗಳು ಇರುತ್ತವೆ. ಬೇಸಿಗೆಯಲ್ಲಿ ಅವುಗಳು ನೀರಿನ ಸಮಸ್ಯೆಯನ್ನು ಅನುಭವಿಸುತ್ತವೆ. ಅವುಗಳ ಈ ಸಮಸ್ಯೆ ಹೋಗಲಾಡಿಸುವುದು ನಮ್ಮ ಕರ್ತವ್ಯ. ಹಾಗಾಗಿ ಪ್ರತಿನಿತ್ಯ ತೊಟ್ಟಿಗೆ ನೀರು ಹಾಕುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

3 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

8 hours ago

ಕೇರಳದಲ್ಲಿ ಭಾರೀ ಮಳೆ ಅಬ್ಬರ : ಹಲವೆಡೆ ಭೂಕುಸಿತ, ಪ್ರವಾಹ ಭೀತಿ

ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್…

8 hours ago

ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…

12 hours ago

ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?

ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…

15 hours ago