ಒಂದಷ್ಟು ಎಡರು ತೊಡರುಗಳ ಮೂಲಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ#AnnaBhagya ಯೋಜನೆಗೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಯೋಜನೆಯನ್ನು ಆಹಾರ ಇಲಾಖೆ ಮಾಡಿಕೊಂಡಿದೆ.
ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರ ಅಕೌಂಟ್ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.
ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್ಗೆ ಬೀಳಲಿದೆ.
ಹಣ ಭಾಗ್ಯ ಹೇಗೆ? ನೀವು ಬಿಪಿಎಲ್ ಪಡಿತರ ಕಾರ್ಡ್ದಾರರಾಗಿರಬೇಕು. ರೇಷನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…