Advertisement
ಪ್ರಮುಖ

#Annabhagya |ಹಣಭಾಗ್ಯದ ಮೂಲಕ ಅನ್ನಭಾಗ್ಯಕ್ಕೆ ಚಾಲನೆ | ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ರೇಷನ್ ದುಡ್ಡು ಜಮೆ |

Share

ಒಂದಷ್ಟು ಎಡರು ತೊಡರುಗಳ ಮೂಲಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ#AnnaBhagya ಯೋಜನೆಗೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ  ಯೋಜನೆಯನ್ನು ಆಹಾರ ಇಲಾಖೆ ಮಾಡಿಕೊಂಡಿದೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ#GuaranteeScheme ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ  5 ಕೆಜಿ ಅಕ್ಕಿಗೆ ಹಣ ಹಾಕಲು ಸರ್ಕಾರ ನಿರ್ಧಾರ ಮಾಡಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‍ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‍ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್‍ಗೆ ಬೀಳಲಿದೆ.

ಹಣ ಭಾಗ್ಯ ಹೇಗೆ?  ನೀವು ಬಿಪಿಎಲ್ ಪಡಿತರ ಕಾರ್ಡ್‍ದಾರರಾಗಿರಬೇಕು. ರೇಷನ್ ಕಾರ್ಡ್‍ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್‌ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

5 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

5 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

12 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

12 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

12 hours ago