ಒಂದಷ್ಟು ಎಡರು ತೊಡರುಗಳ ಮೂಲಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ#AnnaBhagya ಯೋಜನೆಗೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಯೋಜನೆಯನ್ನು ಆಹಾರ ಇಲಾಖೆ ಮಾಡಿಕೊಂಡಿದೆ.
ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರ ಅಕೌಂಟ್ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.
ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್ಗೆ ಬೀಳಲಿದೆ.
ಹಣ ಭಾಗ್ಯ ಹೇಗೆ? ನೀವು ಬಿಪಿಎಲ್ ಪಡಿತರ ಕಾರ್ಡ್ದಾರರಾಗಿರಬೇಕು. ರೇಷನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…