Advertisement
ಪ್ರಮುಖ

#Annabhagya |ಹಣಭಾಗ್ಯದ ಮೂಲಕ ಅನ್ನಭಾಗ್ಯಕ್ಕೆ ಚಾಲನೆ | ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ರೇಷನ್ ದುಡ್ಡು ಜಮೆ |

Share

ಒಂದಷ್ಟು ಎಡರು ತೊಡರುಗಳ ಮೂಲಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ#AnnaBhagya ಯೋಜನೆಗೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ  ಯೋಜನೆಯನ್ನು ಆಹಾರ ಇಲಾಖೆ ಮಾಡಿಕೊಂಡಿದೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ#GuaranteeScheme ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ  5 ಕೆಜಿ ಅಕ್ಕಿಗೆ ಹಣ ಹಾಕಲು ಸರ್ಕಾರ ನಿರ್ಧಾರ ಮಾಡಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‍ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‍ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್‍ಗೆ ಬೀಳಲಿದೆ.

ಹಣ ಭಾಗ್ಯ ಹೇಗೆ?  ನೀವು ಬಿಪಿಎಲ್ ಪಡಿತರ ಕಾರ್ಡ್‍ದಾರರಾಗಿರಬೇಕು. ರೇಷನ್ ಕಾರ್ಡ್‍ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್‌ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

11 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

18 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago