ಒಂದಷ್ಟು ಎಡರು ತೊಡರುಗಳ ಮೂಲಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ#AnnaBhagya ಯೋಜನೆಗೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಯೋಜನೆಯನ್ನು ಆಹಾರ ಇಲಾಖೆ ಮಾಡಿಕೊಂಡಿದೆ.
ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರ ಅಕೌಂಟ್ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.
ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್ಗೆ ಬೀಳಲಿದೆ.
ಹಣ ಭಾಗ್ಯ ಹೇಗೆ? ನೀವು ಬಿಪಿಎಲ್ ಪಡಿತರ ಕಾರ್ಡ್ದಾರರಾಗಿರಬೇಕು. ರೇಷನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…