ಒಂದಷ್ಟು ಎಡರು ತೊಡರುಗಳ ಮೂಲಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ#AnnaBhagya ಯೋಜನೆಗೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಯೋಜನೆಯನ್ನು ಆಹಾರ ಇಲಾಖೆ ಮಾಡಿಕೊಂಡಿದೆ.
ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರ ಅಕೌಂಟ್ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.
ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್ಗೆ ಬೀಳಲಿದೆ.
ಹಣ ಭಾಗ್ಯ ಹೇಗೆ? ನೀವು ಬಿಪಿಎಲ್ ಪಡಿತರ ಕಾರ್ಡ್ದಾರರಾಗಿರಬೇಕು. ರೇಷನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…