ಒಂದಷ್ಟು ಎಡರು ತೊಡರುಗಳ ಮೂಲಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ#AnnaBhagya ಯೋಜನೆಗೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಯೋಜನೆಯನ್ನು ಆಹಾರ ಇಲಾಖೆ ಮಾಡಿಕೊಂಡಿದೆ.
ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರ ಅಕೌಂಟ್ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.
ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್ಗೆ ಬೀಳಲಿದೆ.
ಹಣ ಭಾಗ್ಯ ಹೇಗೆ? ನೀವು ಬಿಪಿಎಲ್ ಪಡಿತರ ಕಾರ್ಡ್ದಾರರಾಗಿರಬೇಕು. ರೇಷನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…