ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋನ್ ಪ್ರಯೋಗ ನಡೆಯುತ್ತಿದೆ. ಗುರುವಾರ ಸುಳ್ಯ ತಾಲೂಕಿನ ಕಳಂಜದ ಕೋಟೆಮುಂಡುಗಾರಿನಲ್ಲಿ ಮೊದಲ ಬಾರಿಗೆ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಕೃಷಿಕರು ಡ್ರೋನ್ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ಕೊರತೆಯಿಂದ ಹಲವಾರು ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದೇ ವೇಳೆ ಶೃಂಗೇರಿ ಮೊದಲಾದ ಕಡೆಗಳಲ್ಲಿ ಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಡ್ರೋನ್ ಬಳಕೆ ಪ್ರಯತ್ನ ನಡೆದಿದೆ. ಮಲ್ಟಿಪ್ಲೆಕ್ಸ್ ಎಂ ಡ್ರೋನ್ ಸುಳ್ಯದ ಕಳಂಜದ ಕೃಷಿಕ ಸುದರ್ಶನ ಕೋಟೆ ಇವರ ನೇತೃತ್ವದಲ್ಲಿ ತಂಡವು ಕೆಲಸ ಆರಂಭಿಸಿದೆ. ಈಗಾಗಲೇ ಹಲವು ಮಂದಿ ಕೃಷಿಕರು ಡ್ರೋನ್ ಮೂಲಕ ಔಷಧಿ ಸಿಂಪಡಣೆಗೆ ಆಸಕ್ತರಾಗಿದ್ದಾರೆ. ಸಿಂಪಡಣೆ ಕಾರ್ಯ ಆರಂಭವಾಗಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.