ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋನ್ ಪ್ರಯೋಗ ನಡೆಯುತ್ತಿದೆ. ಗುರುವಾರ ಸುಳ್ಯ ತಾಲೂಕಿನ ಕಳಂಜದ ಕೋಟೆಮುಂಡುಗಾರಿನಲ್ಲಿ ಮೊದಲ ಬಾರಿಗೆ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಕೃಷಿಕರು ಡ್ರೋನ್ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ಕೊರತೆಯಿಂದ ಹಲವಾರು ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದೇ ವೇಳೆ ಶೃಂಗೇರಿ ಮೊದಲಾದ ಕಡೆಗಳಲ್ಲಿ ಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಡ್ರೋನ್ ಬಳಕೆ ಪ್ರಯತ್ನ ನಡೆದಿದೆ. ಮಲ್ಟಿಪ್ಲೆಕ್ಸ್ ಎಂ ಡ್ರೋನ್ ಸುಳ್ಯದ ಕಳಂಜದ ಕೃಷಿಕ ಸುದರ್ಶನ ಕೋಟೆ ಇವರ ನೇತೃತ್ವದಲ್ಲಿ ತಂಡವು ಕೆಲಸ ಆರಂಭಿಸಿದೆ. ಈಗಾಗಲೇ ಹಲವು ಮಂದಿ ಕೃಷಿಕರು ಡ್ರೋನ್ ಮೂಲಕ ಔಷಧಿ ಸಿಂಪಡಣೆಗೆ ಆಸಕ್ತರಾಗಿದ್ದಾರೆ. ಸಿಂಪಡಣೆ ಕಾರ್ಯ ಆರಂಭವಾಗಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…