ಡ್ರೋನ್ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿನ ನಿಖರತೆಗೆ ಬೆಂಬಲ ಮತ್ತು ಸುಸ್ಥಿರ ಕೃಷಿ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಸಹಯೋಗಕ್ಕೆ ಚಾಲನೆ ದೊರೆತಿದೆ. ಹೀಗಾಗಿ ಭಾರತದಲ್ಲೂ ಡ್ರೋನ್ ತಂತ್ರಜ್ಞಾನದ ಮೂಲಕ ಕೃಷಿ ಅಭಿವೃದ್ಧಿಯ ಕನಸು ನನಸಾಗಲಿದೆ.
ಡ್ರೋನ್ ಮೂಲಕ ಮ್ಯಾಪಿಂಗ್ ಮಾಡುವುದು, ವಿವರವಾದ ಸಮೀಕ್ಷೆ, ಮಣ್ಣಿನ ಮ್ಯಾಪಿಂಗ್, ರೋಗ ಗುರುತಿಸುವಿಕೆ, ಸಸ್ಯದ ಒತ್ತಡ, ನೀರಿನ ನಿಯಂತ್ರಣ, ಸಸ್ಯದ ಶರೀರ ಶಾಸ್ತ್ರದ ಅಧ್ಯಯನ, ಸಸ್ಯದ ಸಂವೇದಕಗಳನ್ನು ಗುರುತಿಸುವುದು, ನ್ಯಾನೊ ತಂತ್ರಜ್ಞಾನದ ಬಳಕೆ ಇತ್ಯಾದಿಯಲ್ಲಿ ಇದು ರೈತರಿಗೆ ನೆರವಾಗುತ್ತದೆ.
ಈ ನಿಟ್ಟಿನಲ್ಲಿ ಪರಷ್ಕೃತ ಮಾರ್ಗಸೂಚಿಗಳ ಮೂಲಕ ಡ್ರೋನ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಇದೀಗ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಡ್ರೋನ್ಗಳನ್ನು ಖರೀದಿಸಲು ಮತ್ತು ಬಳಸಲು ಕೃಷಿಕರಲ್ಲಿ ಆಸಕ್ತಿಯನ್ನು ಹುಟ್ಟುಹಾಕಿದೆ.
ಇಸ್ರೇಲ್ ಡ್ರೋನ್ಗಳ ಬಳಕೆಯಿಂದ ಪ್ರಯೋಜನ ಪಡೆದ ಪ್ರಮುಖ ರಾಷ್ಟಗಳಲ್ಲಿ ಒಂದಾಗಿದೆ. ಕರ್ನಾಟಕ ಸುಮಾರು 12.3 ದಶಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗುತ್ತಿದ್ದು, ಡ್ರೋನ್ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ರೈತರಿಗೆ ಸಾಕಷ್ಟು ಸಹಾಯ ಮಾಡುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…