ಕರ್ನಾಟಕದ ಮೇಲೆ ಈ ಬಾರಿ ವರುಣ ಕೃಪೆಯೇ ತೋರಲಿಲ್ಲ ಅನ್ನೋದು ಬಹು ದೊಡ್ಡ ನೋವು. ರೈತ #Farmer, ರಾಜ್ಯದ ಜನತೆ, ಪ್ರಾಣಿ ಪಕ್ಷಿ ಎಲ್ಲವೂ ಈ ಬಾರಿ ಪರಿತಪಿಸಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ರಾಜ್ಯ ಸರ್ಕಾರ#State govt ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ#Siddaramaiah ಹೇಳಿದ್ದಾರೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ. ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು.
ನಾವು ಜಿಡಿಪಿ ಬೆಳವಣಿಗೆಗೆ ಕೃಷಿ, ಸೇವಾ ಹಾಗೂ ಕೈಗಾರಿಕಾ ವಲಯ ಆರಿಸುತ್ತೇವೆ. ಕೃಷಿ ವಲಯ ಬೆಳೆದರೆ ಜಿಡಿಪಿ ಬೆಳೆಯುತ್ತದೆ. ಕೃಷಿ ಬೆಳೆಯದೇ ಇದ್ದರೆ ತಲಾ ಆದಾಯ ಕಡಿಮೆಯಾಗಲಿದೆ. ಆಗ ಜನ ಕೊಂಡುಕೊಳ್ಳುವುದಿಲ್ಲ. ಕೃಷಿ ಜನರಿಗೆ ಆಸಕ್ತಿ ಬರಬೇಕು. ಯುವಕರಿಗೆ ಹೆಚ್ಚು ಆಸಕ್ತಿ ಇರಬೇಕು. ಟೀಚರ್ ಆಗಿ ನಿವೃತ್ತ ಆದರೂ ಒಬ್ಬರು ಕೃಷಿ ಮಾಡುತ್ತಿದ್ದಾರೆ. ಬೋರ್ವೆಲ್ ಹಾಕಿ ಕೃಷಿ ಮಾಡಿ ಯಶಸ್ಸು ಆಗಿದ್ದಾರೆ. ಎಲ್ಲ ರೈತರು ಆ ಪ್ರಯತ್ನ ಮಾಡಬೇಕು. ಅದಕ್ಕೆ ಪೂರಕ ಕೆಲಸ ವಿವಿ ಮಾಡಬೇಕು ಎಂದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…