Advertisement
MIRROR FOCUS

ಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

Share

ಕರ್ನಾಟಕದ ಮೇಲೆ ಈ ಬಾರಿ ವರುಣ ಕೃಪೆಯೇ ತೋರಲಿಲ್ಲ ಅನ್ನೋದು ಬಹು ದೊಡ್ಡ ನೋವು. ರೈತ #Farmer, ರಾಜ್ಯದ ಜನತೆ, ಪ್ರಾಣಿ ಪಕ್ಷಿ ಎಲ್ಲವೂ ಈ ಬಾರಿ ಪರಿತಪಿಸಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ರಾಜ್ಯ ಸರ್ಕಾರ#State govt ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ#Siddaramaiah ಹೇಳಿದ್ದಾರೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ. ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು.

ನಾವು ಜಿಡಿಪಿ ಬೆಳವಣಿಗೆಗೆ ಕೃಷಿ, ಸೇವಾ ಹಾಗೂ ಕೈಗಾರಿಕಾ ವಲಯ ಆರಿಸುತ್ತೇವೆ. ಕೃಷಿ ವಲಯ ಬೆಳೆದರೆ ಜಿಡಿಪಿ ಬೆಳೆಯುತ್ತದೆ. ಕೃಷಿ ಬೆಳೆಯದೇ ಇದ್ದರೆ ತಲಾ ಆದಾಯ ಕಡಿಮೆಯಾಗಲಿದೆ. ಆಗ ಜನ ಕೊಂಡುಕೊಳ್ಳುವುದಿಲ್ಲ. ಕೃಷಿ ಜನರಿಗೆ ಆಸಕ್ತಿ ಬರಬೇಕು. ಯುವಕರಿಗೆ ಹೆಚ್ಚು ಆಸಕ್ತಿ ಇರಬೇಕು. ಟೀಚರ್ ಆಗಿ ನಿವೃತ್ತ ಆದರೂ ಒಬ್ಬರು ಕೃಷಿ ಮಾಡುತ್ತಿದ್ದಾರೆ. ಬೋರ್‌ವೆಲ್ ಹಾಕಿ ಕೃಷಿ ಮಾಡಿ ಯಶಸ್ಸು ಆಗಿದ್ದಾರೆ. ಎಲ್ಲ ರೈತರು ಆ ಪ್ರಯತ್ನ ಮಾಡಬೇಕು. ಅದಕ್ಕೆ ಪೂರಕ ಕೆಲಸ ವಿವಿ ಮಾಡಬೇಕು ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

56 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago