Advertisement
MIRROR FOCUS

ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.

Share

ಕಳೆದ ವಾರ ರಾಜ್ಯದ ಅಲ್ಲಲ್ಲಿ ಕೊಂಚ ಮಳೆಯಾದರೂ, ಬಿಸಿಲ ಧಗೆ ಕಡಿಮೆಯಾಗಲಿಲ್ಲ. ಉರಿಯುವ ಬೆಂಕಿಗೆ ನೀರು ಸುರಿದಂತಾಗಿ ಬೇಗೆ ಇನ್ನು ಜಾಸ್ತಿಯಾಗಿದೆ. ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದರ ಪರಿಣಾಮ ಕೆಲ ತರಕಾರಿಗಳ ದರ (Vegetable Price Hike) ಏರಿಕೆಯಾಗಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಏರಿಕೆಯಾಗಿದೆ. ಮೆಣಸಿನಕಾಯಿ ದರ ಕೂಡ ಅದೇ ದಾರಿಯಲ್ಲಿದೆ.

Advertisement
Advertisement
Advertisement
Advertisement

ಬೆಂಗಳೂರು(Bengaluru) ಸೇರಿದಂತೆ ಇನ್ನು ಕೆಲವು ನಗರಗಳಿಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚು ಬಿನ್ಸ್ ಮತ್ತು ಮೆಣಸಿನಕಾಯಿ ಪೂರೈಕೆಯಾಗುತ್ತದೆ. ಈ ಭಾಗದಲ್ಲೆಲ್ಲ ತಾಪಮಾನ ಏರಿಕೆಯಾಗಿದ್ದು, ಇಳುವರಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇನ್ನೂ ಕ್ಯಾರೆಟ್ ತಮಿಳುನಾಡು ಭಾಗದಿಂದ ಹೆಚ್ಚು ಪೂರೈಕೆಯಾಗುತ್ತಿದ್ದು, ಅಲ್ಲಿಯೂ ಕೂಡ ಇದೇ ಪರಿಸ್ಥಿತಿ ಹಿನ್ನೆಲೆ ಬೆಲೆ ಗಗನಕ್ಕೇರಿದೆ.

Advertisement

ಕೇವಲ ತರಕಾರಿ ಮಾತ್ರವಲ್ಲದೇ ಹಣ್ಣುಗಳ ದರದಲ್ಲೂ ಕೂಡ ಏರಿಕೆ ಕಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಜೂನ್‍ನಲ್ಲಿ ಈ ಬಾರಿ ಉತ್ತಮ ಮಳೆಯಾದರೆ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದು ವ್ಯಾಪಾರಿಗಳ ಮಾತು. ಕೆಲ ತಿಂಗಳಿನಿಂದ ಒಂದಲ್ಲ ಒಂದು ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗೆಟ್ಟಿರುವ ಜನ, ಅಗತ್ಯ ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಹೈರಾಣಾಗಿದ್ದಾರೆ.

ಕೃಷಿಕರಷ್ಟೇ ಅಲ್ಲ, ಮಾರಾಟಗಾರರೂ ಸಂಕಷ್ಟ ಪಡುತ್ತಿದ್ದಾರೆ. ಬಿಸಿಲಿನ ಕಾರಣದಿಂದ ತರಕಾರಿ ಒಣಗುತ್ತಿದೆ. ಸೊಪ್ಪು ತರಕಾರಿ ಕತೆ ಹೇಳತೀರದು. ಹೀಗಾಗಿ ಮಾರಾಟಗಾರರಿಗೂ ಸಮಸ್ಯೆಯಾಗುತ್ತಿದೆ, ನಷ್ಟ ಹೆಚ್ಚಾಗುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

7 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago