MIRROR FOCUS

ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ವಾರ ರಾಜ್ಯದ ಅಲ್ಲಲ್ಲಿ ಕೊಂಚ ಮಳೆಯಾದರೂ, ಬಿಸಿಲ ಧಗೆ ಕಡಿಮೆಯಾಗಲಿಲ್ಲ. ಉರಿಯುವ ಬೆಂಕಿಗೆ ನೀರು ಸುರಿದಂತಾಗಿ ಬೇಗೆ ಇನ್ನು ಜಾಸ್ತಿಯಾಗಿದೆ. ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದರ ಪರಿಣಾಮ ಕೆಲ ತರಕಾರಿಗಳ ದರ (Vegetable Price Hike) ಏರಿಕೆಯಾಗಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಏರಿಕೆಯಾಗಿದೆ. ಮೆಣಸಿನಕಾಯಿ ದರ ಕೂಡ ಅದೇ ದಾರಿಯಲ್ಲಿದೆ.

Advertisement
Advertisement

ಬೆಂಗಳೂರು(Bengaluru) ಸೇರಿದಂತೆ ಇನ್ನು ಕೆಲವು ನಗರಗಳಿಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚು ಬಿನ್ಸ್ ಮತ್ತು ಮೆಣಸಿನಕಾಯಿ ಪೂರೈಕೆಯಾಗುತ್ತದೆ. ಈ ಭಾಗದಲ್ಲೆಲ್ಲ ತಾಪಮಾನ ಏರಿಕೆಯಾಗಿದ್ದು, ಇಳುವರಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇನ್ನೂ ಕ್ಯಾರೆಟ್ ತಮಿಳುನಾಡು ಭಾಗದಿಂದ ಹೆಚ್ಚು ಪೂರೈಕೆಯಾಗುತ್ತಿದ್ದು, ಅಲ್ಲಿಯೂ ಕೂಡ ಇದೇ ಪರಿಸ್ಥಿತಿ ಹಿನ್ನೆಲೆ ಬೆಲೆ ಗಗನಕ್ಕೇರಿದೆ.

ಕೇವಲ ತರಕಾರಿ ಮಾತ್ರವಲ್ಲದೇ ಹಣ್ಣುಗಳ ದರದಲ್ಲೂ ಕೂಡ ಏರಿಕೆ ಕಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಜೂನ್‍ನಲ್ಲಿ ಈ ಬಾರಿ ಉತ್ತಮ ಮಳೆಯಾದರೆ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದು ವ್ಯಾಪಾರಿಗಳ ಮಾತು. ಕೆಲ ತಿಂಗಳಿನಿಂದ ಒಂದಲ್ಲ ಒಂದು ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗೆಟ್ಟಿರುವ ಜನ, ಅಗತ್ಯ ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಹೈರಾಣಾಗಿದ್ದಾರೆ.

ಕೃಷಿಕರಷ್ಟೇ ಅಲ್ಲ, ಮಾರಾಟಗಾರರೂ ಸಂಕಷ್ಟ ಪಡುತ್ತಿದ್ದಾರೆ. ಬಿಸಿಲಿನ ಕಾರಣದಿಂದ ತರಕಾರಿ ಒಣಗುತ್ತಿದೆ. ಸೊಪ್ಪು ತರಕಾರಿ ಕತೆ ಹೇಳತೀರದು. ಹೀಗಾಗಿ ಮಾರಾಟಗಾರರಿಗೂ ಸಮಸ್ಯೆಯಾಗುತ್ತಿದೆ, ನಷ್ಟ ಹೆಚ್ಚಾಗುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

21 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

21 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

21 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

22 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

22 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

22 hours ago