MIRROR FOCUS

ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ವಾರ ರಾಜ್ಯದ ಅಲ್ಲಲ್ಲಿ ಕೊಂಚ ಮಳೆಯಾದರೂ, ಬಿಸಿಲ ಧಗೆ ಕಡಿಮೆಯಾಗಲಿಲ್ಲ. ಉರಿಯುವ ಬೆಂಕಿಗೆ ನೀರು ಸುರಿದಂತಾಗಿ ಬೇಗೆ ಇನ್ನು ಜಾಸ್ತಿಯಾಗಿದೆ. ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದರ ಪರಿಣಾಮ ಕೆಲ ತರಕಾರಿಗಳ ದರ (Vegetable Price Hike) ಏರಿಕೆಯಾಗಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಏರಿಕೆಯಾಗಿದೆ. ಮೆಣಸಿನಕಾಯಿ ದರ ಕೂಡ ಅದೇ ದಾರಿಯಲ್ಲಿದೆ.

Advertisement
Advertisement

ಬೆಂಗಳೂರು(Bengaluru) ಸೇರಿದಂತೆ ಇನ್ನು ಕೆಲವು ನಗರಗಳಿಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚು ಬಿನ್ಸ್ ಮತ್ತು ಮೆಣಸಿನಕಾಯಿ ಪೂರೈಕೆಯಾಗುತ್ತದೆ. ಈ ಭಾಗದಲ್ಲೆಲ್ಲ ತಾಪಮಾನ ಏರಿಕೆಯಾಗಿದ್ದು, ಇಳುವರಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇನ್ನೂ ಕ್ಯಾರೆಟ್ ತಮಿಳುನಾಡು ಭಾಗದಿಂದ ಹೆಚ್ಚು ಪೂರೈಕೆಯಾಗುತ್ತಿದ್ದು, ಅಲ್ಲಿಯೂ ಕೂಡ ಇದೇ ಪರಿಸ್ಥಿತಿ ಹಿನ್ನೆಲೆ ಬೆಲೆ ಗಗನಕ್ಕೇರಿದೆ.

ಕೇವಲ ತರಕಾರಿ ಮಾತ್ರವಲ್ಲದೇ ಹಣ್ಣುಗಳ ದರದಲ್ಲೂ ಕೂಡ ಏರಿಕೆ ಕಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಜೂನ್‍ನಲ್ಲಿ ಈ ಬಾರಿ ಉತ್ತಮ ಮಳೆಯಾದರೆ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದು ವ್ಯಾಪಾರಿಗಳ ಮಾತು. ಕೆಲ ತಿಂಗಳಿನಿಂದ ಒಂದಲ್ಲ ಒಂದು ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗೆಟ್ಟಿರುವ ಜನ, ಅಗತ್ಯ ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಹೈರಾಣಾಗಿದ್ದಾರೆ.

ಕೃಷಿಕರಷ್ಟೇ ಅಲ್ಲ, ಮಾರಾಟಗಾರರೂ ಸಂಕಷ್ಟ ಪಡುತ್ತಿದ್ದಾರೆ. ಬಿಸಿಲಿನ ಕಾರಣದಿಂದ ತರಕಾರಿ ಒಣಗುತ್ತಿದೆ. ಸೊಪ್ಪು ತರಕಾರಿ ಕತೆ ಹೇಳತೀರದು. ಹೀಗಾಗಿ ಮಾರಾಟಗಾರರಿಗೂ ಸಮಸ್ಯೆಯಾಗುತ್ತಿದೆ, ನಷ್ಟ ಹೆಚ್ಚಾಗುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

13 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

14 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

15 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

16 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago