Advertisement
MIRROR FOCUS

ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.

Share

ಕಳೆದ ವಾರ ರಾಜ್ಯದ ಅಲ್ಲಲ್ಲಿ ಕೊಂಚ ಮಳೆಯಾದರೂ, ಬಿಸಿಲ ಧಗೆ ಕಡಿಮೆಯಾಗಲಿಲ್ಲ. ಉರಿಯುವ ಬೆಂಕಿಗೆ ನೀರು ಸುರಿದಂತಾಗಿ ಬೇಗೆ ಇನ್ನು ಜಾಸ್ತಿಯಾಗಿದೆ. ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದರ ಪರಿಣಾಮ ಕೆಲ ತರಕಾರಿಗಳ ದರ (Vegetable Price Hike) ಏರಿಕೆಯಾಗಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಏರಿಕೆಯಾಗಿದೆ. ಮೆಣಸಿನಕಾಯಿ ದರ ಕೂಡ ಅದೇ ದಾರಿಯಲ್ಲಿದೆ.

ಬೆಂಗಳೂರು(Bengaluru) ಸೇರಿದಂತೆ ಇನ್ನು ಕೆಲವು ನಗರಗಳಿಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚು ಬಿನ್ಸ್ ಮತ್ತು ಮೆಣಸಿನಕಾಯಿ ಪೂರೈಕೆಯಾಗುತ್ತದೆ. ಈ ಭಾಗದಲ್ಲೆಲ್ಲ ತಾಪಮಾನ ಏರಿಕೆಯಾಗಿದ್ದು, ಇಳುವರಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇನ್ನೂ ಕ್ಯಾರೆಟ್ ತಮಿಳುನಾಡು ಭಾಗದಿಂದ ಹೆಚ್ಚು ಪೂರೈಕೆಯಾಗುತ್ತಿದ್ದು, ಅಲ್ಲಿಯೂ ಕೂಡ ಇದೇ ಪರಿಸ್ಥಿತಿ ಹಿನ್ನೆಲೆ ಬೆಲೆ ಗಗನಕ್ಕೇರಿದೆ.

ಕೇವಲ ತರಕಾರಿ ಮಾತ್ರವಲ್ಲದೇ ಹಣ್ಣುಗಳ ದರದಲ್ಲೂ ಕೂಡ ಏರಿಕೆ ಕಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಜೂನ್‍ನಲ್ಲಿ ಈ ಬಾರಿ ಉತ್ತಮ ಮಳೆಯಾದರೆ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದು ವ್ಯಾಪಾರಿಗಳ ಮಾತು. ಕೆಲ ತಿಂಗಳಿನಿಂದ ಒಂದಲ್ಲ ಒಂದು ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗೆಟ್ಟಿರುವ ಜನ, ಅಗತ್ಯ ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಹೈರಾಣಾಗಿದ್ದಾರೆ.

ಕೃಷಿಕರಷ್ಟೇ ಅಲ್ಲ, ಮಾರಾಟಗಾರರೂ ಸಂಕಷ್ಟ ಪಡುತ್ತಿದ್ದಾರೆ. ಬಿಸಿಲಿನ ಕಾರಣದಿಂದ ತರಕಾರಿ ಒಣಗುತ್ತಿದೆ. ಸೊಪ್ಪು ತರಕಾರಿ ಕತೆ ಹೇಳತೀರದು. ಹೀಗಾಗಿ ಮಾರಾಟಗಾರರಿಗೂ ಸಮಸ್ಯೆಯಾಗುತ್ತಿದೆ, ನಷ್ಟ ಹೆಚ್ಚಾಗುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

11 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

11 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago