ಕಳೆದ ವಾರ ರಾಜ್ಯದ ಅಲ್ಲಲ್ಲಿ ಕೊಂಚ ಮಳೆಯಾದರೂ, ಬಿಸಿಲ ಧಗೆ ಕಡಿಮೆಯಾಗಲಿಲ್ಲ. ಉರಿಯುವ ಬೆಂಕಿಗೆ ನೀರು ಸುರಿದಂತಾಗಿ ಬೇಗೆ ಇನ್ನು ಜಾಸ್ತಿಯಾಗಿದೆ. ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದರ ಪರಿಣಾಮ ಕೆಲ ತರಕಾರಿಗಳ ದರ (Vegetable Price Hike) ಏರಿಕೆಯಾಗಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಏರಿಕೆಯಾಗಿದೆ. ಮೆಣಸಿನಕಾಯಿ ದರ ಕೂಡ ಅದೇ ದಾರಿಯಲ್ಲಿದೆ.
ಬೆಂಗಳೂರು(Bengaluru) ಸೇರಿದಂತೆ ಇನ್ನು ಕೆಲವು ನಗರಗಳಿಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚು ಬಿನ್ಸ್ ಮತ್ತು ಮೆಣಸಿನಕಾಯಿ ಪೂರೈಕೆಯಾಗುತ್ತದೆ. ಈ ಭಾಗದಲ್ಲೆಲ್ಲ ತಾಪಮಾನ ಏರಿಕೆಯಾಗಿದ್ದು, ಇಳುವರಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇನ್ನೂ ಕ್ಯಾರೆಟ್ ತಮಿಳುನಾಡು ಭಾಗದಿಂದ ಹೆಚ್ಚು ಪೂರೈಕೆಯಾಗುತ್ತಿದ್ದು, ಅಲ್ಲಿಯೂ ಕೂಡ ಇದೇ ಪರಿಸ್ಥಿತಿ ಹಿನ್ನೆಲೆ ಬೆಲೆ ಗಗನಕ್ಕೇರಿದೆ.
ಕೇವಲ ತರಕಾರಿ ಮಾತ್ರವಲ್ಲದೇ ಹಣ್ಣುಗಳ ದರದಲ್ಲೂ ಕೂಡ ಏರಿಕೆ ಕಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಜೂನ್ನಲ್ಲಿ ಈ ಬಾರಿ ಉತ್ತಮ ಮಳೆಯಾದರೆ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದು ವ್ಯಾಪಾರಿಗಳ ಮಾತು. ಕೆಲ ತಿಂಗಳಿನಿಂದ ಒಂದಲ್ಲ ಒಂದು ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗೆಟ್ಟಿರುವ ಜನ, ಅಗತ್ಯ ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಹೈರಾಣಾಗಿದ್ದಾರೆ.
ಕೃಷಿಕರಷ್ಟೇ ಅಲ್ಲ, ಮಾರಾಟಗಾರರೂ ಸಂಕಷ್ಟ ಪಡುತ್ತಿದ್ದಾರೆ. ಬಿಸಿಲಿನ ಕಾರಣದಿಂದ ತರಕಾರಿ ಒಣಗುತ್ತಿದೆ. ಸೊಪ್ಪು ತರಕಾರಿ ಕತೆ ಹೇಳತೀರದು. ಹೀಗಾಗಿ ಮಾರಾಟಗಾರರಿಗೂ ಸಮಸ್ಯೆಯಾಗುತ್ತಿದೆ, ನಷ್ಟ ಹೆಚ್ಚಾಗುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…