Advertisement
ಪ್ರಮುಖ

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

Share

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು ಉಸಿರಾಡುವಂತಾಗಿದೆ. ಆದರೆ ಇನ್ನುಳಿದೆ ಕೆಲವೆಡೆ ಇನ್ನು ವರುಣದೇವ ಕೃಪೆ ತೋರಿಲ್ಲ. ನೀರಿಗಾಗಿ(Water Scarcity) ಪರದಾಡುವ ಸ್ಥಿತಿ ಬಂದೊದಗಿದೆ. ಅದರಲ್ಲೂ ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ (Gims Hospital Gadag)  ಬರದ ಬಿಸಿ ರೋಗಿಗಳಿಗೂ ತಟ್ಟಿದೆ. ಆಸ್ಪತ್ರೆಗೆ ನೀರಿನ ಅಭಾವ ಕಾಡುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳು, ಸಿಬ್ಬಂದಿಗಳು ಹಾಗೂ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆನಲ್ಲೂ ನೀರಿಗಾಗಿ ಪರದಾಡುವಂತಾಗಿದೆ.

ಆಸ್ಪತ್ರೆಯಲ್ಲಿ ನೀರಿಲ್ಲದಕ್ಕೆ ರೋಗಿಗಳು, ಬಾಣಂತಿಯತು, ಶಿಶುಗಳು ಪರಿಪಾಟು ಕೇಳ ತೀರದಾಗಿದೆ. ಬಾಣಂತಿ ಹಾಗೂ ಶಿಶುಗಳಿಗೆ ಬಿಸಿ ನೀರು ಅವಶ್ಯಕ. ಆದ್ರೆ ಅಲ್ಲಿ ಲೀಟರ್ ತನ್ನಿರು ಸಹ ಸಿಗ್ತಿಲ್ಲ. 1 ಲೀಟರ್ ನಿಂದ ಹಿಡಿದು 20 ಲೀಟರ್ ಕ್ಯಾನ್ ನಲ್ಲಿ ನೀರು ಹಣ ಕೊಟ್ಟು ತರುತ್ತಿದ್ದಾರೆ. ಹೊಟೆಲ್ ಗಳಲ್ಲಿ ಹಣ ಕೊಟ್ಟು ನೀರು ತರುವ ಸ್ಥಿತಿ ರೋಗಿಗಳಿಗೆ ಎದುರಾಗಿದೆ. ಆಸ್ಪತ್ರೆಯಲ್ಲಿ ಮಿತವ್ಯಯವಾಗಿ ನೀರು ಬಿಡ್ತಿದ್ದಾರೆ. ಇತ್ತ ಕಾಲೇಜ್ ನಲ್ಲೂ ನೀರಿಲ್ಲ. ಜಿಮ್ಸ್ ಗೆ ಸಪ್ಲಾಯ್ ಆಗುವ 24/7 ನೀರು ಪೂರೈಕೆ ಆಗ್ತಿಲ್ಲ. ಜಿಮ್ಸ್ ವ್ಯಾಪ್ತಿಯ 6 ಬೋರವೆಲ್ ಪೈಕಿ 4 ಬೋರವೆಲ್ ಬಂದ್ ಬಂದ್ ಆಗಿವೆ. ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗ್ತಿದೆ. ಅದು ಕೂಡಾ ಸರಿಯಾಗಿ ಆಗ್ತಿಲ್ಲ. ಈ ಎಲ್ಲದರಿಂದ ರೋಗಿಗಳು ಪರದಾಡುತ್ತಿದ್ದಾರೆ, ಅಧಿಕಾರಿಗಳು ಮಾತ್ರ ಕೈ ಚೆಲ್ಲಿ ಕೂತಂತಿದೆ.

ಕುಡಿಯುವ ನೀರಿಗಾಗಿ ಜನಾಕ್ರೋಶ: ಇಷ್ಟು ಮಾತ್ರವಲ್ಲದೇ ಕುಡಿಯುವ ನೀರಿಗಾಗಿ ಜನಾಕ್ರೋಶ ಎದ್ದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿಯಲ್ಲಿರುವ ಗ್ರಾಮ ಪಂಚಾಯತ್‍ಗೆ ಮುತ್ತಿಗೆ ಹಾಕಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸವಡಿ ಗ್ರಾಮ ಪಂಚಾಯತ್ ಕಳೆದ 20 ದಿನಗಳಿಂದ ನೀರು ಪೂರೈಸಿಲ್ಲ. ಹೀಗಾಗಿ ಪಿಡಿಓ, ಸಿಬ್ಬಂದಿ, ಜನಪ್ರತಿನಿಧಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರು, ಮಕ್ಕಳು, ಪುರುಷರು ಖಾಲಿ ಕೊಡಗಳೊಂದಿಗೆ ಗ್ರಾ.ಪಂ ಗೆ ಮುತ್ತಿಗೆ ಹಾಕಿದ್ದಾರೆ.

ಮೊದಲು ಇತರೆ ಬಳಕೆಗೆ ಫ್ಲೋರೈಡ್ ಹಾಗೂ ಗಡಸು ನೀರನ್ನಾದ್ರೂ ಬಿಡುತ್ತಿದ್ದರು. ಈಗ ಯಾವ ಕಲುಷಿತ ನೀರೂ ಸಹ ಪೂರೈಸುತ್ತಿಲ್ಲ ಅಂತ ಜನ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಸಮರ್ಪಕ ನೀರು ಪೂರೈಸದಕ್ಕೆ ಖಾಲಿ ಕೊಡಗಳು ಹಿಡಿದು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಡಿಸಿ, ಜಿ.ಪಂ ಸಿ.ಇ.ಓ, ತಹಶೀಲ್ದಾರ್ ಬರುವಂತೆ ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

6 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

7 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

7 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

7 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago