Advertisement
ಪ್ರಮುಖ

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

Share

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು ಉಸಿರಾಡುವಂತಾಗಿದೆ. ಆದರೆ ಇನ್ನುಳಿದೆ ಕೆಲವೆಡೆ ಇನ್ನು ವರುಣದೇವ ಕೃಪೆ ತೋರಿಲ್ಲ. ನೀರಿಗಾಗಿ(Water Scarcity) ಪರದಾಡುವ ಸ್ಥಿತಿ ಬಂದೊದಗಿದೆ. ಅದರಲ್ಲೂ ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ (Gims Hospital Gadag)  ಬರದ ಬಿಸಿ ರೋಗಿಗಳಿಗೂ ತಟ್ಟಿದೆ. ಆಸ್ಪತ್ರೆಗೆ ನೀರಿನ ಅಭಾವ ಕಾಡುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳು, ಸಿಬ್ಬಂದಿಗಳು ಹಾಗೂ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆನಲ್ಲೂ ನೀರಿಗಾಗಿ ಪರದಾಡುವಂತಾಗಿದೆ.

ಆಸ್ಪತ್ರೆಯಲ್ಲಿ ನೀರಿಲ್ಲದಕ್ಕೆ ರೋಗಿಗಳು, ಬಾಣಂತಿಯತು, ಶಿಶುಗಳು ಪರಿಪಾಟು ಕೇಳ ತೀರದಾಗಿದೆ. ಬಾಣಂತಿ ಹಾಗೂ ಶಿಶುಗಳಿಗೆ ಬಿಸಿ ನೀರು ಅವಶ್ಯಕ. ಆದ್ರೆ ಅಲ್ಲಿ ಲೀಟರ್ ತನ್ನಿರು ಸಹ ಸಿಗ್ತಿಲ್ಲ. 1 ಲೀಟರ್ ನಿಂದ ಹಿಡಿದು 20 ಲೀಟರ್ ಕ್ಯಾನ್ ನಲ್ಲಿ ನೀರು ಹಣ ಕೊಟ್ಟು ತರುತ್ತಿದ್ದಾರೆ. ಹೊಟೆಲ್ ಗಳಲ್ಲಿ ಹಣ ಕೊಟ್ಟು ನೀರು ತರುವ ಸ್ಥಿತಿ ರೋಗಿಗಳಿಗೆ ಎದುರಾಗಿದೆ. ಆಸ್ಪತ್ರೆಯಲ್ಲಿ ಮಿತವ್ಯಯವಾಗಿ ನೀರು ಬಿಡ್ತಿದ್ದಾರೆ. ಇತ್ತ ಕಾಲೇಜ್ ನಲ್ಲೂ ನೀರಿಲ್ಲ. ಜಿಮ್ಸ್ ಗೆ ಸಪ್ಲಾಯ್ ಆಗುವ 24/7 ನೀರು ಪೂರೈಕೆ ಆಗ್ತಿಲ್ಲ. ಜಿಮ್ಸ್ ವ್ಯಾಪ್ತಿಯ 6 ಬೋರವೆಲ್ ಪೈಕಿ 4 ಬೋರವೆಲ್ ಬಂದ್ ಬಂದ್ ಆಗಿವೆ. ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗ್ತಿದೆ. ಅದು ಕೂಡಾ ಸರಿಯಾಗಿ ಆಗ್ತಿಲ್ಲ. ಈ ಎಲ್ಲದರಿಂದ ರೋಗಿಗಳು ಪರದಾಡುತ್ತಿದ್ದಾರೆ, ಅಧಿಕಾರಿಗಳು ಮಾತ್ರ ಕೈ ಚೆಲ್ಲಿ ಕೂತಂತಿದೆ.

ಕುಡಿಯುವ ನೀರಿಗಾಗಿ ಜನಾಕ್ರೋಶ: ಇಷ್ಟು ಮಾತ್ರವಲ್ಲದೇ ಕುಡಿಯುವ ನೀರಿಗಾಗಿ ಜನಾಕ್ರೋಶ ಎದ್ದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿಯಲ್ಲಿರುವ ಗ್ರಾಮ ಪಂಚಾಯತ್‍ಗೆ ಮುತ್ತಿಗೆ ಹಾಕಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸವಡಿ ಗ್ರಾಮ ಪಂಚಾಯತ್ ಕಳೆದ 20 ದಿನಗಳಿಂದ ನೀರು ಪೂರೈಸಿಲ್ಲ. ಹೀಗಾಗಿ ಪಿಡಿಓ, ಸಿಬ್ಬಂದಿ, ಜನಪ್ರತಿನಿಧಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರು, ಮಕ್ಕಳು, ಪುರುಷರು ಖಾಲಿ ಕೊಡಗಳೊಂದಿಗೆ ಗ್ರಾ.ಪಂ ಗೆ ಮುತ್ತಿಗೆ ಹಾಕಿದ್ದಾರೆ.

ಮೊದಲು ಇತರೆ ಬಳಕೆಗೆ ಫ್ಲೋರೈಡ್ ಹಾಗೂ ಗಡಸು ನೀರನ್ನಾದ್ರೂ ಬಿಡುತ್ತಿದ್ದರು. ಈಗ ಯಾವ ಕಲುಷಿತ ನೀರೂ ಸಹ ಪೂರೈಸುತ್ತಿಲ್ಲ ಅಂತ ಜನ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಸಮರ್ಪಕ ನೀರು ಪೂರೈಸದಕ್ಕೆ ಖಾಲಿ ಕೊಡಗಳು ಹಿಡಿದು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಡಿಸಿ, ಜಿ.ಪಂ ಸಿ.ಇ.ಓ, ತಹಶೀಲ್ದಾರ್ ಬರುವಂತೆ ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

24 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago