ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು ಉಸಿರಾಡುವಂತಾಗಿದೆ. ಆದರೆ ಇನ್ನುಳಿದೆ ಕೆಲವೆಡೆ ಇನ್ನು ವರುಣದೇವ ಕೃಪೆ ತೋರಿಲ್ಲ. ನೀರಿಗಾಗಿ(Water Scarcity) ಪರದಾಡುವ ಸ್ಥಿತಿ ಬಂದೊದಗಿದೆ. ಅದರಲ್ಲೂ ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ (Gims Hospital Gadag) ಬರದ ಬಿಸಿ ರೋಗಿಗಳಿಗೂ ತಟ್ಟಿದೆ. ಆಸ್ಪತ್ರೆಗೆ ನೀರಿನ ಅಭಾವ ಕಾಡುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳು, ಸಿಬ್ಬಂದಿಗಳು ಹಾಗೂ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆನಲ್ಲೂ ನೀರಿಗಾಗಿ ಪರದಾಡುವಂತಾಗಿದೆ.
ಕುಡಿಯುವ ನೀರಿಗಾಗಿ ಜನಾಕ್ರೋಶ: ಇಷ್ಟು ಮಾತ್ರವಲ್ಲದೇ ಕುಡಿಯುವ ನೀರಿಗಾಗಿ ಜನಾಕ್ರೋಶ ಎದ್ದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿಯಲ್ಲಿರುವ ಗ್ರಾಮ ಪಂಚಾಯತ್ಗೆ ಮುತ್ತಿಗೆ ಹಾಕಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸವಡಿ ಗ್ರಾಮ ಪಂಚಾಯತ್ ಕಳೆದ 20 ದಿನಗಳಿಂದ ನೀರು ಪೂರೈಸಿಲ್ಲ. ಹೀಗಾಗಿ ಪಿಡಿಓ, ಸಿಬ್ಬಂದಿ, ಜನಪ್ರತಿನಿಧಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರು, ಮಕ್ಕಳು, ಪುರುಷರು ಖಾಲಿ ಕೊಡಗಳೊಂದಿಗೆ ಗ್ರಾ.ಪಂ ಗೆ ಮುತ್ತಿಗೆ ಹಾಕಿದ್ದಾರೆ.
ಮೊದಲು ಇತರೆ ಬಳಕೆಗೆ ಫ್ಲೋರೈಡ್ ಹಾಗೂ ಗಡಸು ನೀರನ್ನಾದ್ರೂ ಬಿಡುತ್ತಿದ್ದರು. ಈಗ ಯಾವ ಕಲುಷಿತ ನೀರೂ ಸಹ ಪೂರೈಸುತ್ತಿಲ್ಲ ಅಂತ ಜನ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಸಮರ್ಪಕ ನೀರು ಪೂರೈಸದಕ್ಕೆ ಖಾಲಿ ಕೊಡಗಳು ಹಿಡಿದು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಡಿಸಿ, ಜಿ.ಪಂ ಸಿ.ಇ.ಓ, ತಹಶೀಲ್ದಾರ್ ಬರುವಂತೆ ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…