ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು ಉಸಿರಾಡುವಂತಾಗಿದೆ. ಆದರೆ ಇನ್ನುಳಿದೆ ಕೆಲವೆಡೆ ಇನ್ನು ವರುಣದೇವ ಕೃಪೆ ತೋರಿಲ್ಲ. ನೀರಿಗಾಗಿ(Water Scarcity) ಪರದಾಡುವ ಸ್ಥಿತಿ ಬಂದೊದಗಿದೆ. ಅದರಲ್ಲೂ ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ (Gims Hospital Gadag) ಬರದ ಬಿಸಿ ರೋಗಿಗಳಿಗೂ ತಟ್ಟಿದೆ. ಆಸ್ಪತ್ರೆಗೆ ನೀರಿನ ಅಭಾವ ಕಾಡುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳು, ಸಿಬ್ಬಂದಿಗಳು ಹಾಗೂ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆನಲ್ಲೂ ನೀರಿಗಾಗಿ ಪರದಾಡುವಂತಾಗಿದೆ.
ಕುಡಿಯುವ ನೀರಿಗಾಗಿ ಜನಾಕ್ರೋಶ: ಇಷ್ಟು ಮಾತ್ರವಲ್ಲದೇ ಕುಡಿಯುವ ನೀರಿಗಾಗಿ ಜನಾಕ್ರೋಶ ಎದ್ದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿಯಲ್ಲಿರುವ ಗ್ರಾಮ ಪಂಚಾಯತ್ಗೆ ಮುತ್ತಿಗೆ ಹಾಕಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸವಡಿ ಗ್ರಾಮ ಪಂಚಾಯತ್ ಕಳೆದ 20 ದಿನಗಳಿಂದ ನೀರು ಪೂರೈಸಿಲ್ಲ. ಹೀಗಾಗಿ ಪಿಡಿಓ, ಸಿಬ್ಬಂದಿ, ಜನಪ್ರತಿನಿಧಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರು, ಮಕ್ಕಳು, ಪುರುಷರು ಖಾಲಿ ಕೊಡಗಳೊಂದಿಗೆ ಗ್ರಾ.ಪಂ ಗೆ ಮುತ್ತಿಗೆ ಹಾಕಿದ್ದಾರೆ.
ಮೊದಲು ಇತರೆ ಬಳಕೆಗೆ ಫ್ಲೋರೈಡ್ ಹಾಗೂ ಗಡಸು ನೀರನ್ನಾದ್ರೂ ಬಿಡುತ್ತಿದ್ದರು. ಈಗ ಯಾವ ಕಲುಷಿತ ನೀರೂ ಸಹ ಪೂರೈಸುತ್ತಿಲ್ಲ ಅಂತ ಜನ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಸಮರ್ಪಕ ನೀರು ಪೂರೈಸದಕ್ಕೆ ಖಾಲಿ ಕೊಡಗಳು ಹಿಡಿದು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಡಿಸಿ, ಜಿ.ಪಂ ಸಿ.ಇ.ಓ, ತಹಶೀಲ್ದಾರ್ ಬರುವಂತೆ ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…