ಹಾವೇರಿ ಜಿಲ್ಲೆಗೆ ಬರಗಾಲದ ಛಾಯೆ | ಈಗಲೇ ಬತ್ತಿದ ಜೀವನಾಡಿ ವರದಾ ನದಿ | ನೀರಿಲ್ಲದೆ ಜನ-ಜಾನುವಾರುಗಳ ಪರದಾಟ |

March 4, 2024
8:58 PM
ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದಂತೆಯೇ ನೀರಿನ ಕೊರತೆ ಎಲ್ಲೆಡೆ ಕಾಡಲು ಆರಂಭವಾಗಿದೆ.

ರಾಜ್ಯಕ್ಕೆ ಈ ಬಾರಿ ತೀವ್ರಮಟ್ಟದ ಬರಗಾಲ(Drought) ಕಾಡುವ ಭೀತಿ ಎದುರಾಗಿದೆ. ಮಳೆಗಾಲಕ್ಕೆ(Rain Season) ಇನ್ನು ಮೂರರಿಂದ ನಾಲ್ಕು ತಿಂಗಳುಗಳು ಬಾಕಿ ಇವೆ. ಆದರೆ ನೀರಿನ ಕೊರತೆ(Water Scarcity) ಈಗಾಗಗಲೇ ಹೈರಣಾಗಿಸಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಬರಗಾಲದ ಛಾಯೆ ಆವರಿಸಿದೆ. ಇನ್ನೂ ಹಾವೇರಿ (Haveri) ಜಿಲ್ಲೆಯ ಜೀವನದಿ ವರದಾ ನದಿಯ (Varada River) ಒಡಲು ಬರಿದಾಗುತ್ತಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ (Drinking Water Problem) ಪರಿಸ್ಥಿತಿ ನಿರ್ಮಾಣವಾಗಿದೆ.

ವರದಾ ನದಿಗೆ ನಿರ್ಮಿಸಲಾಗಿದ್ದ ಚೆಕ್ ಡ್ಯಾಂಗಳಲ್ಲೂ ನೀರು ಖಾಲಿಯಾಗಿದೆ. ಜಿಲ್ಲೆಯ 15 ಕ್ಕೂ ಅಧಿಕ ಚೆಕ್ ಡ್ಯಾಂಗಳು ನೀರಿಲ್ಲದೆ ಬರಿದಾಗಿವೆ. ವರದಾ ನದಿಯಿಂದ ದೇವಗಿರಿ, ಯಲ್ಲಾಪುರ ಮನ್ನಂಗಿ ಮತ್ತು ಮೇಳಗಟ್ಟಿಗೆ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆ ಮೂಲಕ ನೀರನ್ನು ಗ್ರಾಮಗಳಿಗೆ ಒದಗಿಸಲಾಗುತ್ತಿತ್ತು. ಈಗ ವರದಾ ನದಿ ಸಂಪೂರ್ಣವಾಗಿ ಖಾಲಿಯಾಗಿದ್ದು ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಇನ್ನೂ ರೈತರು ಕೃಷಿಗಾಗಿ ಪಂಪ್‍ಗಳನ್ನು ಬಳಸಿ ಇರುವ ನೀರನ್ನೂ ಖಾಲಿ ಮಾಡುತ್ತಿದ್ದಾರೆ. ಈಗಾಗಲೇ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಹನಿ ನೀರಿಗೂ ಪದದಾಡುವ ಪರಸ್ಥಿತಿ ನಿರ್ಮಾಣವಾಗುವ ಭೀತಿ ಕಾಡುತ್ತಿದೆ.

  • ಅಂತರ್ಜಾಲ ಮಾಹಿತಿ

Due to the lack of rain in the state this time, many districts are under the shadow of drought. Still Varada River is draining the life of Haveri district and people and cattle are facing drinking water problem.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror