ಹಾವೇರಿ ಜಿಲ್ಲೆಗೆ ಬರಗಾಲದ ಛಾಯೆ | ಈಗಲೇ ಬತ್ತಿದ ಜೀವನಾಡಿ ವರದಾ ನದಿ | ನೀರಿಲ್ಲದೆ ಜನ-ಜಾನುವಾರುಗಳ ಪರದಾಟ |

March 4, 2024
8:58 PM
ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದಂತೆಯೇ ನೀರಿನ ಕೊರತೆ ಎಲ್ಲೆಡೆ ಕಾಡಲು ಆರಂಭವಾಗಿದೆ.

ರಾಜ್ಯಕ್ಕೆ ಈ ಬಾರಿ ತೀವ್ರಮಟ್ಟದ ಬರಗಾಲ(Drought) ಕಾಡುವ ಭೀತಿ ಎದುರಾಗಿದೆ. ಮಳೆಗಾಲಕ್ಕೆ(Rain Season) ಇನ್ನು ಮೂರರಿಂದ ನಾಲ್ಕು ತಿಂಗಳುಗಳು ಬಾಕಿ ಇವೆ. ಆದರೆ ನೀರಿನ ಕೊರತೆ(Water Scarcity) ಈಗಾಗಗಲೇ ಹೈರಣಾಗಿಸಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಬರಗಾಲದ ಛಾಯೆ ಆವರಿಸಿದೆ. ಇನ್ನೂ ಹಾವೇರಿ (Haveri) ಜಿಲ್ಲೆಯ ಜೀವನದಿ ವರದಾ ನದಿಯ (Varada River) ಒಡಲು ಬರಿದಾಗುತ್ತಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ (Drinking Water Problem) ಪರಿಸ್ಥಿತಿ ನಿರ್ಮಾಣವಾಗಿದೆ.

ವರದಾ ನದಿಗೆ ನಿರ್ಮಿಸಲಾಗಿದ್ದ ಚೆಕ್ ಡ್ಯಾಂಗಳಲ್ಲೂ ನೀರು ಖಾಲಿಯಾಗಿದೆ. ಜಿಲ್ಲೆಯ 15 ಕ್ಕೂ ಅಧಿಕ ಚೆಕ್ ಡ್ಯಾಂಗಳು ನೀರಿಲ್ಲದೆ ಬರಿದಾಗಿವೆ. ವರದಾ ನದಿಯಿಂದ ದೇವಗಿರಿ, ಯಲ್ಲಾಪುರ ಮನ್ನಂಗಿ ಮತ್ತು ಮೇಳಗಟ್ಟಿಗೆ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆ ಮೂಲಕ ನೀರನ್ನು ಗ್ರಾಮಗಳಿಗೆ ಒದಗಿಸಲಾಗುತ್ತಿತ್ತು. ಈಗ ವರದಾ ನದಿ ಸಂಪೂರ್ಣವಾಗಿ ಖಾಲಿಯಾಗಿದ್ದು ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಇನ್ನೂ ರೈತರು ಕೃಷಿಗಾಗಿ ಪಂಪ್‍ಗಳನ್ನು ಬಳಸಿ ಇರುವ ನೀರನ್ನೂ ಖಾಲಿ ಮಾಡುತ್ತಿದ್ದಾರೆ. ಈಗಾಗಲೇ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಹನಿ ನೀರಿಗೂ ಪದದಾಡುವ ಪರಸ್ಥಿತಿ ನಿರ್ಮಾಣವಾಗುವ ಭೀತಿ ಕಾಡುತ್ತಿದೆ.

  • ಅಂತರ್ಜಾಲ ಮಾಹಿತಿ

Due to the lack of rain in the state this time, many districts are under the shadow of drought. Still Varada River is draining the life of Haveri district and people and cattle are facing drinking water problem.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror