Advertisement
MIRROR FOCUS

ರಾಜ್ಯದಲ್ಲಿ ಬರ ಪರಿಸ್ಥಿತಿ : ಸಂಕಷ್ಟದಲ್ಲಿ ರೈತಾಪಿ ವರ್ಗ : ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

Share

ರಾಜ್ಯ ಸುಭಿಕ್ಷವಾಗಿದ್ದಾಗ ನಾಡಹಬ್ಬ ಮೈಸೂರು ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ಈ ಭಾರಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಆಗಿದ್ದರಿಂದ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ ಮಾಹಿತಿ ನೀಡಿದ್ದಾರೆ.

ಈ ಕುರಿತಾಗಿ ಟ್ವಿಟರ್‌ (X)ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ಅದ್ಧೂರಿ ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ಇದೀಗ ಸರಳ ದಸರಾ ಆಚರಣೆ ಮಾಡಬೇಕಾ ಅಥವಾ ಅದ್ಧೂರಿ ದಸರಾ ಆಚರಣೆ ಮಾಡಬೇಕಾ ಎನ್ನುವ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿತ್ತು. ಅದ್ಧೂರಿ ದಸರಾ ಆಚರಣೆಗೆ ಈ ಹಿಂದೆ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಮುಂಗಾರು ಕೈ ಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

23 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

23 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

24 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago