MIRROR FOCUS

ದುಬೈ ಭಾರೀ ಮಳೆಗೆ ಕಾರಣ ಏನು…? | ನೀರಿಗಾಗಿ ನಡೆದ “ಮೋಡ ಬಿತ್ತನೆ” ಕಾರಣವೇ..? ತಾಪಮಾನ ಏರಿಕೆ ಕಾರಣವೇ..? | ಚಿಂತಿಸುತ್ತಿದ್ದಾರೆ ಹವಾಮಾನ ತಜ್ಞರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದುಬೈನಲ್ಲಿ ಸೋಮವಾರ ತಡರಾತ್ರಿ ಆರಂಭವಾದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ, ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಹೆದ್ದಾರಿಗಳು ಮುಳುಗಿವೆ. ನೆರೆಯ ಒಮಾನ್ ಮತ್ತು ಆಗ್ನೇಯ ಇರಾನ್‌ನಲ್ಲಿಯೂ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಒಮಾನ್‌ನಲ್ಲಿ ಭಾರೀ ಮಳೆಯು ಈ ಪ್ರದೇಶದಲ್ಲಿ ತೀವ್ರ ಪ್ರವಾಹವನ್ನು ಉಂಟುಮಾಡಿ 18  ಜನರು ಬಲಿಯಾಗಿದ್ದರು. ಇದೀಗ ಒಮ್ಮೆಲೇ ದುಬೈಯಲ್ಲಿ ಭಾರೀ ಮಳೆಗೆ ಕಾರಣವೇನು ಎಂದು ಹವಾಮಾನ ತಜ್ಞರು ಚಿಂತಿಸುತ್ತಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಕಾರಣವೇ..? ಅಥವಾ ಮೋಡ ಬಿತ್ತನೆ ಕಾರಣವೇ..?

Advertisement

ಓಮನ್ ಮತ್ತು ದುಬೈನಲ್ಲಿ ಭಾರೀ ಮಳೆಯು ಹವಾಮಾನ ಬದಲಾವಣೆಯಿಂದಲೇ  ಸಾಧ್ಯತೆ ಹೆಚ್ಚು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಆದರೆ ಬ್ಲೂಮ್‌ಬರ್ಗ್ ಮಾಧ್ಯಮ ವರದಿಯ ಪ್ರಕಾರ ಭಾರೀ ಮಳೆಗೆ ಮೋಡ ಬಿತ್ತನೆಗೆ ಕಾರಣವಾಗಿದೆ, ಈ ಪ್ರಕ್ರಿಯೆಯಲ್ಲಿ ರಾಸಾಯನಿಕಗಳನ್ನು ವಾತಾವರಣದಲ್ಲಿ ಬಿಡಲಾಗುತ್ತದೆ ಮತ್ತು ಅವುಗಳಿಂದಾಗಿ ಉಂಟಾಗುವ ಮೋಡಗಳಿಂದ ಹೆಚ್ಚು ಮಳೆಯಾಗುತ್ತದೆ. ದುಬೈಯಲ್ಲಿ 2002 ರಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಮೋಡ ಬಿತ್ತನೆ ತಂತ್ರವನ್ನು ಅನುಸರಿಸಿತ್ತು. ಈ ಬಾರಿಯೂ ಅದೇ ಕ್ರಮದತ್ತ ದುಬೈ ಮುಂದಾಗಿತ್ತು.

ಕೃತಕ ಮಳೆಯೇ…? ಹವಾಮಾನ ಬದಲಾವಣೆಯಿಂದ ಪ್ರವಾಹವೇ..? : ಹವಾಮಾನ  ಕೇಂದ್ರಗಳ ಪ್ರಕಾರ  ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮತ್ತು ಮಂಗಳವಾರದಂದು ಅಲ್ ಐನ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನಗಳನ್ನು ರವಾನಿಸಿದೆ ಎಂದು ಹೇಳುತ್ತಾರೆ. ಹೀಗಾಗಿ ಮರುಭೂಮಿಯ ನಗರ ದುಬೈ ಕೇವಲ 24 ಗಂಟೆಗಳಲ್ಲಿ ಮಳೆಯಲ್ಲಿ ತೋಯ್ದಿದೆ. ಇದು ವಾಸ್ತವವಾಗಿ ಸುಮಾರು ಎರಡು ವರ್ಷಗಳಲ್ಲಿ ಬೀಳುವ ಮಳೆಯ ಪ್ರಮಾಣವಾಗಿದೆ. ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ ಐತಿಹಾಸಿಕ ಮಳೆಯಾಗಿದೆ. ಅಂದರೆ ಈ ಪ್ರಮಾಣದ ಮಳೆ ಮೋಡ ಬಿತ್ತನೆಯಿಂದ ಮಾತ್ರವೇ ಸಾಧ್ಯ. ಮೋಡಗಳಲ್ಲಿ ಉಪ್ಪು ಮಿಶ್ರಣಗಳನ್ನು ಸಿಂಪಡಿಸುವ ಪ್ರಕ್ರಿಯೆಯು ಮೋಡದ ಘನೀಕರಣಕ್ಕೆ ಕಾರಣವಾಗುತ್ತದೆ ಮತ್ತು ಅದು ಮಳೆಯನ್ನು ಉಂಟುಮಾಡುತ್ತದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

4 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

4 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

5 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

5 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

5 hours ago