MIRROR FOCUS

ದುಬೈ ಭಾರೀ ಮಳೆಗೆ ಕಾರಣ ಏನು…? | ನೀರಿಗಾಗಿ ನಡೆದ “ಮೋಡ ಬಿತ್ತನೆ” ಕಾರಣವೇ..? ತಾಪಮಾನ ಏರಿಕೆ ಕಾರಣವೇ..? | ಚಿಂತಿಸುತ್ತಿದ್ದಾರೆ ಹವಾಮಾನ ತಜ್ಞರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದುಬೈನಲ್ಲಿ ಸೋಮವಾರ ತಡರಾತ್ರಿ ಆರಂಭವಾದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ, ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಹೆದ್ದಾರಿಗಳು ಮುಳುಗಿವೆ. ನೆರೆಯ ಒಮಾನ್ ಮತ್ತು ಆಗ್ನೇಯ ಇರಾನ್‌ನಲ್ಲಿಯೂ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಒಮಾನ್‌ನಲ್ಲಿ ಭಾರೀ ಮಳೆಯು ಈ ಪ್ರದೇಶದಲ್ಲಿ ತೀವ್ರ ಪ್ರವಾಹವನ್ನು ಉಂಟುಮಾಡಿ 18  ಜನರು ಬಲಿಯಾಗಿದ್ದರು. ಇದೀಗ ಒಮ್ಮೆಲೇ ದುಬೈಯಲ್ಲಿ ಭಾರೀ ಮಳೆಗೆ ಕಾರಣವೇನು ಎಂದು ಹವಾಮಾನ ತಜ್ಞರು ಚಿಂತಿಸುತ್ತಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಕಾರಣವೇ..? ಅಥವಾ ಮೋಡ ಬಿತ್ತನೆ ಕಾರಣವೇ..?

Advertisement

ಓಮನ್ ಮತ್ತು ದುಬೈನಲ್ಲಿ ಭಾರೀ ಮಳೆಯು ಹವಾಮಾನ ಬದಲಾವಣೆಯಿಂದಲೇ  ಸಾಧ್ಯತೆ ಹೆಚ್ಚು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಆದರೆ ಬ್ಲೂಮ್‌ಬರ್ಗ್ ಮಾಧ್ಯಮ ವರದಿಯ ಪ್ರಕಾರ ಭಾರೀ ಮಳೆಗೆ ಮೋಡ ಬಿತ್ತನೆಗೆ ಕಾರಣವಾಗಿದೆ, ಈ ಪ್ರಕ್ರಿಯೆಯಲ್ಲಿ ರಾಸಾಯನಿಕಗಳನ್ನು ವಾತಾವರಣದಲ್ಲಿ ಬಿಡಲಾಗುತ್ತದೆ ಮತ್ತು ಅವುಗಳಿಂದಾಗಿ ಉಂಟಾಗುವ ಮೋಡಗಳಿಂದ ಹೆಚ್ಚು ಮಳೆಯಾಗುತ್ತದೆ. ದುಬೈಯಲ್ಲಿ 2002 ರಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಮೋಡ ಬಿತ್ತನೆ ತಂತ್ರವನ್ನು ಅನುಸರಿಸಿತ್ತು. ಈ ಬಾರಿಯೂ ಅದೇ ಕ್ರಮದತ್ತ ದುಬೈ ಮುಂದಾಗಿತ್ತು.

ಕೃತಕ ಮಳೆಯೇ…? ಹವಾಮಾನ ಬದಲಾವಣೆಯಿಂದ ಪ್ರವಾಹವೇ..? : ಹವಾಮಾನ  ಕೇಂದ್ರಗಳ ಪ್ರಕಾರ  ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮತ್ತು ಮಂಗಳವಾರದಂದು ಅಲ್ ಐನ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನಗಳನ್ನು ರವಾನಿಸಿದೆ ಎಂದು ಹೇಳುತ್ತಾರೆ. ಹೀಗಾಗಿ ಮರುಭೂಮಿಯ ನಗರ ದುಬೈ ಕೇವಲ 24 ಗಂಟೆಗಳಲ್ಲಿ ಮಳೆಯಲ್ಲಿ ತೋಯ್ದಿದೆ. ಇದು ವಾಸ್ತವವಾಗಿ ಸುಮಾರು ಎರಡು ವರ್ಷಗಳಲ್ಲಿ ಬೀಳುವ ಮಳೆಯ ಪ್ರಮಾಣವಾಗಿದೆ. ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ ಐತಿಹಾಸಿಕ ಮಳೆಯಾಗಿದೆ. ಅಂದರೆ ಈ ಪ್ರಮಾಣದ ಮಳೆ ಮೋಡ ಬಿತ್ತನೆಯಿಂದ ಮಾತ್ರವೇ ಸಾಧ್ಯ. ಮೋಡಗಳಲ್ಲಿ ಉಪ್ಪು ಮಿಶ್ರಣಗಳನ್ನು ಸಿಂಪಡಿಸುವ ಪ್ರಕ್ರಿಯೆಯು ಮೋಡದ ಘನೀಕರಣಕ್ಕೆ ಕಾರಣವಾಗುತ್ತದೆ ಮತ್ತು ಅದು ಮಳೆಯನ್ನು ಉಂಟುಮಾಡುತ್ತದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

2 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

5 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

5 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

8 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago