ದುಬೈನಲ್ಲಿ ಸೋಮವಾರ ತಡರಾತ್ರಿ ಆರಂಭವಾದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ, ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಹೆದ್ದಾರಿಗಳು ಮುಳುಗಿವೆ. ನೆರೆಯ ಒಮಾನ್ ಮತ್ತು ಆಗ್ನೇಯ ಇರಾನ್ನಲ್ಲಿಯೂ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಒಮಾನ್ನಲ್ಲಿ ಭಾರೀ ಮಳೆಯು ಈ ಪ್ರದೇಶದಲ್ಲಿ ತೀವ್ರ ಪ್ರವಾಹವನ್ನು ಉಂಟುಮಾಡಿ 18 ಜನರು ಬಲಿಯಾಗಿದ್ದರು. ಇದೀಗ ಒಮ್ಮೆಲೇ ದುಬೈಯಲ್ಲಿ ಭಾರೀ ಮಳೆಗೆ ಕಾರಣವೇನು ಎಂದು ಹವಾಮಾನ ತಜ್ಞರು ಚಿಂತಿಸುತ್ತಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಕಾರಣವೇ..? ಅಥವಾ ಮೋಡ ಬಿತ್ತನೆ ಕಾರಣವೇ..?
ಓಮನ್ ಮತ್ತು ದುಬೈನಲ್ಲಿ ಭಾರೀ ಮಳೆಯು ಹವಾಮಾನ ಬದಲಾವಣೆಯಿಂದಲೇ ಸಾಧ್ಯತೆ ಹೆಚ್ಚು ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಆದರೆ ಬ್ಲೂಮ್ಬರ್ಗ್ ಮಾಧ್ಯಮ ವರದಿಯ ಪ್ರಕಾರ ಭಾರೀ ಮಳೆಗೆ ಮೋಡ ಬಿತ್ತನೆಗೆ ಕಾರಣವಾಗಿದೆ, ಈ ಪ್ರಕ್ರಿಯೆಯಲ್ಲಿ ರಾಸಾಯನಿಕಗಳನ್ನು ವಾತಾವರಣದಲ್ಲಿ ಬಿಡಲಾಗುತ್ತದೆ ಮತ್ತು ಅವುಗಳಿಂದಾಗಿ ಉಂಟಾಗುವ ಮೋಡಗಳಿಂದ ಹೆಚ್ಚು ಮಳೆಯಾಗುತ್ತದೆ. ದುಬೈಯಲ್ಲಿ 2002 ರಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಮೋಡ ಬಿತ್ತನೆ ತಂತ್ರವನ್ನು ಅನುಸರಿಸಿತ್ತು. ಈ ಬಾರಿಯೂ ಅದೇ ಕ್ರಮದತ್ತ ದುಬೈ ಮುಂದಾಗಿತ್ತು.
ಕೃತಕ ಮಳೆಯೇ…? ಹವಾಮಾನ ಬದಲಾವಣೆಯಿಂದ ಪ್ರವಾಹವೇ..? : ಹವಾಮಾನ ಕೇಂದ್ರಗಳ ಪ್ರಕಾರ ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮತ್ತು ಮಂಗಳವಾರದಂದು ಅಲ್ ಐನ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನಗಳನ್ನು ರವಾನಿಸಿದೆ ಎಂದು ಹೇಳುತ್ತಾರೆ. ಹೀಗಾಗಿ ಮರುಭೂಮಿಯ ನಗರ ದುಬೈ ಕೇವಲ 24 ಗಂಟೆಗಳಲ್ಲಿ ಮಳೆಯಲ್ಲಿ ತೋಯ್ದಿದೆ. ಇದು ವಾಸ್ತವವಾಗಿ ಸುಮಾರು ಎರಡು ವರ್ಷಗಳಲ್ಲಿ ಬೀಳುವ ಮಳೆಯ ಪ್ರಮಾಣವಾಗಿದೆ. ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ ಐತಿಹಾಸಿಕ ಮಳೆಯಾಗಿದೆ. ಅಂದರೆ ಈ ಪ್ರಮಾಣದ ಮಳೆ ಮೋಡ ಬಿತ್ತನೆಯಿಂದ ಮಾತ್ರವೇ ಸಾಧ್ಯ. ಮೋಡಗಳಲ್ಲಿ ಉಪ್ಪು ಮಿಶ್ರಣಗಳನ್ನು ಸಿಂಪಡಿಸುವ ಪ್ರಕ್ರಿಯೆಯು ಮೋಡದ ಘನೀಕರಣಕ್ಕೆ ಕಾರಣವಾಗುತ್ತದೆ ಮತ್ತು ಅದು ಮಳೆಯನ್ನು ಉಂಟುಮಾಡುತ್ತದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…