Advertisement
MIRROR FOCUS

ದುಬೈ ಭಾರೀ ಮಳೆಗೆ ಕಾರಣ ಏನು…? | ನೀರಿಗಾಗಿ ನಡೆದ “ಮೋಡ ಬಿತ್ತನೆ” ಕಾರಣವೇ..? ತಾಪಮಾನ ಏರಿಕೆ ಕಾರಣವೇ..? | ಚಿಂತಿಸುತ್ತಿದ್ದಾರೆ ಹವಾಮಾನ ತಜ್ಞರು |

Share

ದುಬೈನಲ್ಲಿ ಸೋಮವಾರ ತಡರಾತ್ರಿ ಆರಂಭವಾದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ, ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಹೆದ್ದಾರಿಗಳು ಮುಳುಗಿವೆ. ನೆರೆಯ ಒಮಾನ್ ಮತ್ತು ಆಗ್ನೇಯ ಇರಾನ್‌ನಲ್ಲಿಯೂ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಒಮಾನ್‌ನಲ್ಲಿ ಭಾರೀ ಮಳೆಯು ಈ ಪ್ರದೇಶದಲ್ಲಿ ತೀವ್ರ ಪ್ರವಾಹವನ್ನು ಉಂಟುಮಾಡಿ 18  ಜನರು ಬಲಿಯಾಗಿದ್ದರು. ಇದೀಗ ಒಮ್ಮೆಲೇ ದುಬೈಯಲ್ಲಿ ಭಾರೀ ಮಳೆಗೆ ಕಾರಣವೇನು ಎಂದು ಹವಾಮಾನ ತಜ್ಞರು ಚಿಂತಿಸುತ್ತಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಕಾರಣವೇ..? ಅಥವಾ ಮೋಡ ಬಿತ್ತನೆ ಕಾರಣವೇ..?

ಓಮನ್ ಮತ್ತು ದುಬೈನಲ್ಲಿ ಭಾರೀ ಮಳೆಯು ಹವಾಮಾನ ಬದಲಾವಣೆಯಿಂದಲೇ  ಸಾಧ್ಯತೆ ಹೆಚ್ಚು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಆದರೆ ಬ್ಲೂಮ್‌ಬರ್ಗ್ ಮಾಧ್ಯಮ ವರದಿಯ ಪ್ರಕಾರ ಭಾರೀ ಮಳೆಗೆ ಮೋಡ ಬಿತ್ತನೆಗೆ ಕಾರಣವಾಗಿದೆ, ಈ ಪ್ರಕ್ರಿಯೆಯಲ್ಲಿ ರಾಸಾಯನಿಕಗಳನ್ನು ವಾತಾವರಣದಲ್ಲಿ ಬಿಡಲಾಗುತ್ತದೆ ಮತ್ತು ಅವುಗಳಿಂದಾಗಿ ಉಂಟಾಗುವ ಮೋಡಗಳಿಂದ ಹೆಚ್ಚು ಮಳೆಯಾಗುತ್ತದೆ. ದುಬೈಯಲ್ಲಿ 2002 ರಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಮೋಡ ಬಿತ್ತನೆ ತಂತ್ರವನ್ನು ಅನುಸರಿಸಿತ್ತು. ಈ ಬಾರಿಯೂ ಅದೇ ಕ್ರಮದತ್ತ ದುಬೈ ಮುಂದಾಗಿತ್ತು.

ಕೃತಕ ಮಳೆಯೇ…? ಹವಾಮಾನ ಬದಲಾವಣೆಯಿಂದ ಪ್ರವಾಹವೇ..? : ಹವಾಮಾನ  ಕೇಂದ್ರಗಳ ಪ್ರಕಾರ  ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮತ್ತು ಮಂಗಳವಾರದಂದು ಅಲ್ ಐನ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನಗಳನ್ನು ರವಾನಿಸಿದೆ ಎಂದು ಹೇಳುತ್ತಾರೆ. ಹೀಗಾಗಿ ಮರುಭೂಮಿಯ ನಗರ ದುಬೈ ಕೇವಲ 24 ಗಂಟೆಗಳಲ್ಲಿ ಮಳೆಯಲ್ಲಿ ತೋಯ್ದಿದೆ. ಇದು ವಾಸ್ತವವಾಗಿ ಸುಮಾರು ಎರಡು ವರ್ಷಗಳಲ್ಲಿ ಬೀಳುವ ಮಳೆಯ ಪ್ರಮಾಣವಾಗಿದೆ. ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ ಐತಿಹಾಸಿಕ ಮಳೆಯಾಗಿದೆ. ಅಂದರೆ ಈ ಪ್ರಮಾಣದ ಮಳೆ ಮೋಡ ಬಿತ್ತನೆಯಿಂದ ಮಾತ್ರವೇ ಸಾಧ್ಯ. ಮೋಡಗಳಲ್ಲಿ ಉಪ್ಪು ಮಿಶ್ರಣಗಳನ್ನು ಸಿಂಪಡಿಸುವ ಪ್ರಕ್ರಿಯೆಯು ಮೋಡದ ಘನೀಕರಣಕ್ಕೆ ಕಾರಣವಾಗುತ್ತದೆ ಮತ್ತು ಅದು ಮಳೆಯನ್ನು ಉಂಟುಮಾಡುತ್ತದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago