Advertisement
MIRROR FOCUS

ದುಬೈ ಭಾರೀ ಮಳೆಗೆ ಕಾರಣ ಏನು…? | ನೀರಿಗಾಗಿ ನಡೆದ “ಮೋಡ ಬಿತ್ತನೆ” ಕಾರಣವೇ..? ತಾಪಮಾನ ಏರಿಕೆ ಕಾರಣವೇ..? | ಚಿಂತಿಸುತ್ತಿದ್ದಾರೆ ಹವಾಮಾನ ತಜ್ಞರು |

Share

ದುಬೈನಲ್ಲಿ ಸೋಮವಾರ ತಡರಾತ್ರಿ ಆರಂಭವಾದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ, ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಹೆದ್ದಾರಿಗಳು ಮುಳುಗಿವೆ. ನೆರೆಯ ಒಮಾನ್ ಮತ್ತು ಆಗ್ನೇಯ ಇರಾನ್‌ನಲ್ಲಿಯೂ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಒಮಾನ್‌ನಲ್ಲಿ ಭಾರೀ ಮಳೆಯು ಈ ಪ್ರದೇಶದಲ್ಲಿ ತೀವ್ರ ಪ್ರವಾಹವನ್ನು ಉಂಟುಮಾಡಿ 18  ಜನರು ಬಲಿಯಾಗಿದ್ದರು. ಇದೀಗ ಒಮ್ಮೆಲೇ ದುಬೈಯಲ್ಲಿ ಭಾರೀ ಮಳೆಗೆ ಕಾರಣವೇನು ಎಂದು ಹವಾಮಾನ ತಜ್ಞರು ಚಿಂತಿಸುತ್ತಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಕಾರಣವೇ..? ಅಥವಾ ಮೋಡ ಬಿತ್ತನೆ ಕಾರಣವೇ..?

ಓಮನ್ ಮತ್ತು ದುಬೈನಲ್ಲಿ ಭಾರೀ ಮಳೆಯು ಹವಾಮಾನ ಬದಲಾವಣೆಯಿಂದಲೇ  ಸಾಧ್ಯತೆ ಹೆಚ್ಚು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಆದರೆ ಬ್ಲೂಮ್‌ಬರ್ಗ್ ಮಾಧ್ಯಮ ವರದಿಯ ಪ್ರಕಾರ ಭಾರೀ ಮಳೆಗೆ ಮೋಡ ಬಿತ್ತನೆಗೆ ಕಾರಣವಾಗಿದೆ, ಈ ಪ್ರಕ್ರಿಯೆಯಲ್ಲಿ ರಾಸಾಯನಿಕಗಳನ್ನು ವಾತಾವರಣದಲ್ಲಿ ಬಿಡಲಾಗುತ್ತದೆ ಮತ್ತು ಅವುಗಳಿಂದಾಗಿ ಉಂಟಾಗುವ ಮೋಡಗಳಿಂದ ಹೆಚ್ಚು ಮಳೆಯಾಗುತ್ತದೆ. ದುಬೈಯಲ್ಲಿ 2002 ರಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಮೋಡ ಬಿತ್ತನೆ ತಂತ್ರವನ್ನು ಅನುಸರಿಸಿತ್ತು. ಈ ಬಾರಿಯೂ ಅದೇ ಕ್ರಮದತ್ತ ದುಬೈ ಮುಂದಾಗಿತ್ತು.

ಕೃತಕ ಮಳೆಯೇ…? ಹವಾಮಾನ ಬದಲಾವಣೆಯಿಂದ ಪ್ರವಾಹವೇ..? : ಹವಾಮಾನ  ಕೇಂದ್ರಗಳ ಪ್ರಕಾರ  ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮತ್ತು ಮಂಗಳವಾರದಂದು ಅಲ್ ಐನ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನಗಳನ್ನು ರವಾನಿಸಿದೆ ಎಂದು ಹೇಳುತ್ತಾರೆ. ಹೀಗಾಗಿ ಮರುಭೂಮಿಯ ನಗರ ದುಬೈ ಕೇವಲ 24 ಗಂಟೆಗಳಲ್ಲಿ ಮಳೆಯಲ್ಲಿ ತೋಯ್ದಿದೆ. ಇದು ವಾಸ್ತವವಾಗಿ ಸುಮಾರು ಎರಡು ವರ್ಷಗಳಲ್ಲಿ ಬೀಳುವ ಮಳೆಯ ಪ್ರಮಾಣವಾಗಿದೆ. ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ ಐತಿಹಾಸಿಕ ಮಳೆಯಾಗಿದೆ. ಅಂದರೆ ಈ ಪ್ರಮಾಣದ ಮಳೆ ಮೋಡ ಬಿತ್ತನೆಯಿಂದ ಮಾತ್ರವೇ ಸಾಧ್ಯ. ಮೋಡಗಳಲ್ಲಿ ಉಪ್ಪು ಮಿಶ್ರಣಗಳನ್ನು ಸಿಂಪಡಿಸುವ ಪ್ರಕ್ರಿಯೆಯು ಮೋಡದ ಘನೀಕರಣಕ್ಕೆ ಕಾರಣವಾಗುತ್ತದೆ ಮತ್ತು ಅದು ಮಳೆಯನ್ನು ಉಂಟುಮಾಡುತ್ತದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago