Advertisement
MIRROR FOCUS

ದುಬೈ ಭಾರೀ ಮಳೆಗೆ ಕಾರಣ ಏನು…? | ನೀರಿಗಾಗಿ ನಡೆದ “ಮೋಡ ಬಿತ್ತನೆ” ಕಾರಣವೇ..? ತಾಪಮಾನ ಏರಿಕೆ ಕಾರಣವೇ..? | ಚಿಂತಿಸುತ್ತಿದ್ದಾರೆ ಹವಾಮಾನ ತಜ್ಞರು |

Share

ದುಬೈನಲ್ಲಿ ಸೋಮವಾರ ತಡರಾತ್ರಿ ಆರಂಭವಾದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ, ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಹೆದ್ದಾರಿಗಳು ಮುಳುಗಿವೆ. ನೆರೆಯ ಒಮಾನ್ ಮತ್ತು ಆಗ್ನೇಯ ಇರಾನ್‌ನಲ್ಲಿಯೂ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಒಮಾನ್‌ನಲ್ಲಿ ಭಾರೀ ಮಳೆಯು ಈ ಪ್ರದೇಶದಲ್ಲಿ ತೀವ್ರ ಪ್ರವಾಹವನ್ನು ಉಂಟುಮಾಡಿ 18  ಜನರು ಬಲಿಯಾಗಿದ್ದರು. ಇದೀಗ ಒಮ್ಮೆಲೇ ದುಬೈಯಲ್ಲಿ ಭಾರೀ ಮಳೆಗೆ ಕಾರಣವೇನು ಎಂದು ಹವಾಮಾನ ತಜ್ಞರು ಚಿಂತಿಸುತ್ತಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಕಾರಣವೇ..? ಅಥವಾ ಮೋಡ ಬಿತ್ತನೆ ಕಾರಣವೇ..?

Advertisement
Advertisement

ಓಮನ್ ಮತ್ತು ದುಬೈನಲ್ಲಿ ಭಾರೀ ಮಳೆಯು ಹವಾಮಾನ ಬದಲಾವಣೆಯಿಂದಲೇ  ಸಾಧ್ಯತೆ ಹೆಚ್ಚು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಆದರೆ ಬ್ಲೂಮ್‌ಬರ್ಗ್ ಮಾಧ್ಯಮ ವರದಿಯ ಪ್ರಕಾರ ಭಾರೀ ಮಳೆಗೆ ಮೋಡ ಬಿತ್ತನೆಗೆ ಕಾರಣವಾಗಿದೆ, ಈ ಪ್ರಕ್ರಿಯೆಯಲ್ಲಿ ರಾಸಾಯನಿಕಗಳನ್ನು ವಾತಾವರಣದಲ್ಲಿ ಬಿಡಲಾಗುತ್ತದೆ ಮತ್ತು ಅವುಗಳಿಂದಾಗಿ ಉಂಟಾಗುವ ಮೋಡಗಳಿಂದ ಹೆಚ್ಚು ಮಳೆಯಾಗುತ್ತದೆ. ದುಬೈಯಲ್ಲಿ 2002 ರಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಮೋಡ ಬಿತ್ತನೆ ತಂತ್ರವನ್ನು ಅನುಸರಿಸಿತ್ತು. ಈ ಬಾರಿಯೂ ಅದೇ ಕ್ರಮದತ್ತ ದುಬೈ ಮುಂದಾಗಿತ್ತು.

Advertisement

ಕೃತಕ ಮಳೆಯೇ…? ಹವಾಮಾನ ಬದಲಾವಣೆಯಿಂದ ಪ್ರವಾಹವೇ..? : ಹವಾಮಾನ  ಕೇಂದ್ರಗಳ ಪ್ರಕಾರ  ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮತ್ತು ಮಂಗಳವಾರದಂದು ಅಲ್ ಐನ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನಗಳನ್ನು ರವಾನಿಸಿದೆ ಎಂದು ಹೇಳುತ್ತಾರೆ. ಹೀಗಾಗಿ ಮರುಭೂಮಿಯ ನಗರ ದುಬೈ ಕೇವಲ 24 ಗಂಟೆಗಳಲ್ಲಿ ಮಳೆಯಲ್ಲಿ ತೋಯ್ದಿದೆ. ಇದು ವಾಸ್ತವವಾಗಿ ಸುಮಾರು ಎರಡು ವರ್ಷಗಳಲ್ಲಿ ಬೀಳುವ ಮಳೆಯ ಪ್ರಮಾಣವಾಗಿದೆ. ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ ಐತಿಹಾಸಿಕ ಮಳೆಯಾಗಿದೆ. ಅಂದರೆ ಈ ಪ್ರಮಾಣದ ಮಳೆ ಮೋಡ ಬಿತ್ತನೆಯಿಂದ ಮಾತ್ರವೇ ಸಾಧ್ಯ. ಮೋಡಗಳಲ್ಲಿ ಉಪ್ಪು ಮಿಶ್ರಣಗಳನ್ನು ಸಿಂಪಡಿಸುವ ಪ್ರಕ್ರಿಯೆಯು ಮೋಡದ ಘನೀಕರಣಕ್ಕೆ ಕಾರಣವಾಗುತ್ತದೆ ಮತ್ತು ಅದು ಮಳೆಯನ್ನು ಉಂಟುಮಾಡುತ್ತದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

8 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

9 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

10 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

10 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

11 hours ago