Advertisement
MIRROR FOCUS

ದುಬೈ ಭಾರೀ ಮಳೆಗೆ ಕಾರಣ ಏನು…? | ನೀರಿಗಾಗಿ ನಡೆದ “ಮೋಡ ಬಿತ್ತನೆ” ಕಾರಣವೇ..? ತಾಪಮಾನ ಏರಿಕೆ ಕಾರಣವೇ..? | ಚಿಂತಿಸುತ್ತಿದ್ದಾರೆ ಹವಾಮಾನ ತಜ್ಞರು |

Share

ದುಬೈನಲ್ಲಿ ಸೋಮವಾರ ತಡರಾತ್ರಿ ಆರಂಭವಾದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ, ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಹೆದ್ದಾರಿಗಳು ಮುಳುಗಿವೆ. ನೆರೆಯ ಒಮಾನ್ ಮತ್ತು ಆಗ್ನೇಯ ಇರಾನ್‌ನಲ್ಲಿಯೂ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಒಮಾನ್‌ನಲ್ಲಿ ಭಾರೀ ಮಳೆಯು ಈ ಪ್ರದೇಶದಲ್ಲಿ ತೀವ್ರ ಪ್ರವಾಹವನ್ನು ಉಂಟುಮಾಡಿ 18  ಜನರು ಬಲಿಯಾಗಿದ್ದರು. ಇದೀಗ ಒಮ್ಮೆಲೇ ದುಬೈಯಲ್ಲಿ ಭಾರೀ ಮಳೆಗೆ ಕಾರಣವೇನು ಎಂದು ಹವಾಮಾನ ತಜ್ಞರು ಚಿಂತಿಸುತ್ತಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಕಾರಣವೇ..? ಅಥವಾ ಮೋಡ ಬಿತ್ತನೆ ಕಾರಣವೇ..?

ಓಮನ್ ಮತ್ತು ದುಬೈನಲ್ಲಿ ಭಾರೀ ಮಳೆಯು ಹವಾಮಾನ ಬದಲಾವಣೆಯಿಂದಲೇ  ಸಾಧ್ಯತೆ ಹೆಚ್ಚು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಆದರೆ ಬ್ಲೂಮ್‌ಬರ್ಗ್ ಮಾಧ್ಯಮ ವರದಿಯ ಪ್ರಕಾರ ಭಾರೀ ಮಳೆಗೆ ಮೋಡ ಬಿತ್ತನೆಗೆ ಕಾರಣವಾಗಿದೆ, ಈ ಪ್ರಕ್ರಿಯೆಯಲ್ಲಿ ರಾಸಾಯನಿಕಗಳನ್ನು ವಾತಾವರಣದಲ್ಲಿ ಬಿಡಲಾಗುತ್ತದೆ ಮತ್ತು ಅವುಗಳಿಂದಾಗಿ ಉಂಟಾಗುವ ಮೋಡಗಳಿಂದ ಹೆಚ್ಚು ಮಳೆಯಾಗುತ್ತದೆ. ದುಬೈಯಲ್ಲಿ 2002 ರಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಮೋಡ ಬಿತ್ತನೆ ತಂತ್ರವನ್ನು ಅನುಸರಿಸಿತ್ತು. ಈ ಬಾರಿಯೂ ಅದೇ ಕ್ರಮದತ್ತ ದುಬೈ ಮುಂದಾಗಿತ್ತು.

ಕೃತಕ ಮಳೆಯೇ…? ಹವಾಮಾನ ಬದಲಾವಣೆಯಿಂದ ಪ್ರವಾಹವೇ..? : ಹವಾಮಾನ  ಕೇಂದ್ರಗಳ ಪ್ರಕಾರ  ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮತ್ತು ಮಂಗಳವಾರದಂದು ಅಲ್ ಐನ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನಗಳನ್ನು ರವಾನಿಸಿದೆ ಎಂದು ಹೇಳುತ್ತಾರೆ. ಹೀಗಾಗಿ ಮರುಭೂಮಿಯ ನಗರ ದುಬೈ ಕೇವಲ 24 ಗಂಟೆಗಳಲ್ಲಿ ಮಳೆಯಲ್ಲಿ ತೋಯ್ದಿದೆ. ಇದು ವಾಸ್ತವವಾಗಿ ಸುಮಾರು ಎರಡು ವರ್ಷಗಳಲ್ಲಿ ಬೀಳುವ ಮಳೆಯ ಪ್ರಮಾಣವಾಗಿದೆ. ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ ಐತಿಹಾಸಿಕ ಮಳೆಯಾಗಿದೆ. ಅಂದರೆ ಈ ಪ್ರಮಾಣದ ಮಳೆ ಮೋಡ ಬಿತ್ತನೆಯಿಂದ ಮಾತ್ರವೇ ಸಾಧ್ಯ. ಮೋಡಗಳಲ್ಲಿ ಉಪ್ಪು ಮಿಶ್ರಣಗಳನ್ನು ಸಿಂಪಡಿಸುವ ಪ್ರಕ್ರಿಯೆಯು ಮೋಡದ ಘನೀಕರಣಕ್ಕೆ ಕಾರಣವಾಗುತ್ತದೆ ಮತ್ತು ಅದು ಮಳೆಯನ್ನು ಉಂಟುಮಾಡುತ್ತದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

19 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago