ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ | ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿತ | ಮುಂದುವರಿದ ಮಳೆ |

June 27, 2024
12:44 PM
ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನಿರಂತರ ಮಳೆ  ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನವೂ ದ ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಲವು ಕಡೆ ನದಿ-ಹೊಳೆಗಳು ತುಂಬಿ ಹರಿಯುತ್ತಿದೆ.

ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ  ಸ್ನಾನ ಘಟ್ಟ ಮುಳುಗಿದೆ. ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ದೇವಸ್ಥಾದ ವತಿಯಿಂದ ಸೂಚನೆ ನೀಡಲಾಗಿದೆ.

ಮಣ್ಣಿನ ದಿಬ್ಬ ಕುಸಿತ: ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ  ನಸುಕಿನ‌ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.

ಉತ್ತರ ಕನ್ನಡ  ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು ಹೊನ್ನಾವರದ  ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್‌ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತದಂತಹ ಸಣ್ಣಪುಟ್ಟ ಘಟನೆಗಳು ನಡೆದಿವೆ. ಕೆಲವು ಕಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಬರೆ ಕುಸಿತದಂತಹ ಘಟನೆಗಳಿಂದ ಕೃಷಿ ಭೂಮಿಗೆ ನೀರು ಹರಿದಿದೆ.

  • ಅಂತರ್ಜಾಲ ಮಾಹಿತಿ

Due to heavy rains in the weatern ghat region, schools and colleges in the district have been declared closed for the second day in a row. This decision comes in response to ongoing heavy rainfall throughout the Dakshina Kannada district.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror