MIRROR FOCUS

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ | ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿತ | ಮುಂದುವರಿದ ಮಳೆ |

Share

ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನಿರಂತರ ಮಳೆ  ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನವೂ ದ ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಲವು ಕಡೆ ನದಿ-ಹೊಳೆಗಳು ತುಂಬಿ ಹರಿಯುತ್ತಿದೆ.

Advertisement
Advertisement
ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ  ಸ್ನಾನ ಘಟ್ಟ ಮುಳುಗಿದೆ. ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ದೇವಸ್ಥಾದ ವತಿಯಿಂದ ಸೂಚನೆ ನೀಡಲಾಗಿದೆ.

ಮಣ್ಣಿನ ದಿಬ್ಬ ಕುಸಿತ: ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ  ನಸುಕಿನ‌ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.

ಉತ್ತರ ಕನ್ನಡ  ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು ಹೊನ್ನಾವರದ  ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್‌ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತದಂತಹ ಸಣ್ಣಪುಟ್ಟ ಘಟನೆಗಳು ನಡೆದಿವೆ. ಕೆಲವು ಕಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಬರೆ ಕುಸಿತದಂತಹ ಘಟನೆಗಳಿಂದ ಕೃಷಿ ಭೂಮಿಗೆ ನೀರು ಹರಿದಿದೆ.

  • ಅಂತರ್ಜಾಲ ಮಾಹಿತಿ

Due to heavy rains in the weatern ghat region, schools and colleges in the district have been declared closed for the second day in a row. This decision comes in response to ongoing heavy rainfall throughout the Dakshina Kannada district.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

10 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

10 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

10 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

11 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

11 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

11 hours ago