ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನವೂ ದ ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಲವು ಕಡೆ ನದಿ-ಹೊಳೆಗಳು ತುಂಬಿ ಹರಿಯುತ್ತಿದೆ.
ಮಣ್ಣಿನ ದಿಬ್ಬ ಕುಸಿತ: ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ ನಸುಕಿನ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತದಂತಹ ಸಣ್ಣಪುಟ್ಟ ಘಟನೆಗಳು ನಡೆದಿವೆ. ಕೆಲವು ಕಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಬರೆ ಕುಸಿತದಂತಹ ಘಟನೆಗಳಿಂದ ಕೃಷಿ ಭೂಮಿಗೆ ನೀರು ಹರಿದಿದೆ.
Due to heavy rains in the weatern ghat region, schools and colleges in the district have been declared closed for the second day in a row. This decision comes in response to ongoing heavy rainfall throughout the Dakshina Kannada district.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…